Karnataka MLC Election; ಹೊರಟ್ಟಿಗೆ  ದಾಖಲೆಯ ಗೆಲುವು ತನ್ನಿ, ಶಿಕ್ಷಕರಲ್ಲಿ ಬೊಮ್ಮಾಯಿ ಮನವಿ!

Published : Jun 05, 2022, 03:15 PM ISTUpdated : Jun 05, 2022, 03:20 PM IST
Karnataka MLC Election; ಹೊರಟ್ಟಿಗೆ  ದಾಖಲೆಯ ಗೆಲುವು ತನ್ನಿ, ಶಿಕ್ಷಕರಲ್ಲಿ ಬೊಮ್ಮಾಯಿ ಮನವಿ!

ಸಾರಾಂಶ

ರಾಜ್ಯದ ಶಿಕ್ಷಕ ಸಮುದಾಯದ ಏಕೈಕ ಆಶಾಕಿರಣವಾಗಿರುವ ಬಸವರಾಜ ಹೊರಟ್ಟಿಯವರು ಶಿಕ್ಷಣ ಕ್ಷೇತ್ರದ ದಂತ ಕಥೆಯಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದ್ದಾರೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ (ಜೂ.5):  ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಸುಧಾರಣೆಗೆ ಕಳೆದ ನಾಲ್ಕು ದಶಕ ಗಳಿಂದ ಅವಿರತವಾಗಿ ಶ್ರಮಿಸುತ್ತಿರುವ ರಾಜ್ಯದ ಶಿಕ್ಷಕ ಸಮುದಾಯದ ಏಕೈಕ ಆಶಾಕಿರಣವಾಗಿರುವ ಬಸವರಾಜ ಹೊರಟ್ಟಿಯವರು ಶಿಕ್ಷಣ ಕ್ಷೇತ್ರದ ದಂತ ಕಥೆಯಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ಆದರ್ಶನಗರದ ಡಾ. ಜಿ.ವ್ಹಿ.ಜೋಶಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊರಟ್ಟಿಯವರ ಚುನಾವಣಾ ಪ್ರಚಾರಾರ್ಥ ನಡೆದ ಶಿಕ್ಷಕರೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಹೊರಟ್ಟಿಯವರ ಚುನಾವಣೆ ಎಂದರೆ ಶಿಕ್ಷಕ ಸಮೂಹದಲ್ಲೆಡೆ ಸಂಭ್ರಮ ಮನೆಮಾಡಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತದೆ.

ಭೋಪಾಲ್‌ನ ಅನಾಥ ಟಾಪರ್‌ಗೆ ಸಾಲ ವಸೂಲಾತಿ ನೋಟಿಸ್‌ !

ಕಳೆದ 42 ವರ್ಷ ಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೊರಟ್ಟಿಯವರು ಅಮೂಲ್ಯ ಕೊಡುಗೆ ನೀಡಿದ್ದು ಶಿಕ್ಷಣ ಕ್ಷೇತ್ರದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಿ ಕಾನೂನು ತೊಡಕನ್ನು ಸರಳಗೊಳಿಸಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಿಕ್ಷಕರಿಗೆ ನ್ಯಾಯ ಒದಗಿಸುವ ಮೂಲಕ ರಾಜ್ಯದ ಶಿಕ್ಷಕ ಸ್ನೇಹಿ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದರು.

1983 ರಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ ಜಾರಿಗೆ ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆ ಬಂದಿದ್ದು ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ. ಬದಲಾವಣೆಗೆ ತಕ್ಕಂತೆ ಶಿಕ್ಷಣ ಕ್ಷೇತ್ರಕ್ಕೆ ಸದಾಕಾಲ ಬೆಂಬಲ ನೀಡುತ್ತ ಹೊರಟ್ಟಿಯವರು ಪ್ರತಿಯೊಂದು ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.

CDS Examnನಲ್ಲಿ ಚಾಲಕನ ಪುತ್ರ ದೇಶಕ್ಕೆ ಫಸ್ಟ್ ರ‍್ಯಾಂಕ್

ರಾಜ್ಯದಲ್ಲಿ ಶಿಕ್ಷಕರಿಗೆ ಎಲ್ಲ ರೀತಿಯ ನ್ಯಾಯ ಒದಗಿಸಿ ರುವ ಏಕೈಕ ನಾಯಕ ಎಂದರೆ ಅದು ಬಸವರಾಜ ಹೊರಟ್ಟಿಯವರು. ಶಿಕ್ಷಕರ ಬಗ್ಗೆ ಅಪಾರವಾದ ಶೃದ್ಧೆ, ಕಾಳಜಿ ಇರುವ ಏಕೈಕ ನಾಯಕ ರಾಗಿರುವ ಹೊರಟ್ಟಿಯವರು ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ಶಿಕ್ಷಕರ ಸಮಸ್ಯೆಗಳ ಈಡೇರಿಕೆ ಕುರಿತು ನಡೆಸಿದ ಹೋರಾಟ ಹಾಗೂ ಅವರ ಕೊಡುಗೆ ಕುರಿತು ಸಂಶೋಧನೆ ನಡೆಸಬೇಕೆನ್ನುವದು ನನ್ನ ಆಕಾಂಕ್ಷೆಯಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಇಂದು ಮೋದಿ ನೇತೃತ್ವದ ಸರಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿದ್ದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಾಗುತ್ತಿದೆ. ಈ ಸಂದರ್ಭದಲ್ಲಿ ಹೊರಟ್ಟಿಯವರು ರಾಜ್ಯದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಚಿಂತನೆಯಿಂದ ಬಿ.ಜೆ.ಪಿ. ಸೇರಿದ್ದಾರೆ. ಬಿ.ಜೆ.ಪಿ. ಮತ್ತು ಹೊರಟ್ಟಿ ಎರಡೂ ಶಕ್ತಿಗಳು ಇಂದು ಸಮ್ಮಿಳಿತಗೊಂಡಿದ್ದು ಇದರಿಂದ ಈ ಬಾರಿ ಚುನಾವಣೆಯಲ್ಲಿ ಬಿ.ಜೆ.ಪಿ. ಅರ್ಭರ್ಥಿ ದಾಖಲೆ ಪ್ರಮಾಣದಲ್ಲಿ ಜಯಶಾಲಿಯಾಗಲಿದ್ದು ಹೊರಟ್ಟಿಯವರ ಗೆಲುವು ನಾಡಿನ ಶಿಕ್ಷಕರೆಲ್ಲರ ಗೆಲುವು ಆಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

Textbookಗಳ ಮರು ಮುದ್ರಣ ಇಲ್ಲ; ಸಚಿವ ಬಿಸಿ.ನಾಗೇಶ್

ಅಭ್ಯರ್ಥಿ ಬಸವರಾಜ ಹೊರಟ್ಟಿ ಮಾತನಾಡಿ ಶಿಕ್ಷಕರು ಹಾಗೂ ತಮ್ಮ ನಡುವೆ ಕುಟುಂಬ ರೀತಿಯ ಬಾಂಧವ್ಯವಿದ್ದು ಪರಸ್ಪರ ಪ್ರೀತಿ ವಿಶ್ವಾಸವಿದೆ ಕಳೆದ ಏಳು ಚುನಾವಣೆಯಲ್ಲಿಯೂ ಸಹ ಎಲ್ಲಾ ಶಿಕ್ಷಕರು ಪಕ್ಷಾತೀತವಾಗಿ ತಮ್ಮನ್ನು ಬೆಂಬಲಿಸಿದ್ದು ಈ ಬಾರಿಯೂ ಸಹ ಎಲ್ಲಾ ಶಿಕ್ಷಕರು ನನ್ನನ್ನು ಬೆಂಬಲಿಸುವ ಅದಮ್ಯ ವಿಶ್ವಾಸವಿದೆ ಎಂದರು.

ನನಗೆ ಎರಡು ತಲೆಮಾರಿನ ಶಿಕ್ಷಕರ ಆಶೀರ್ವಾದ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಶನಿವಾರ ಹುಬ್ಬಳ್ಳಿಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ವಿವಿಧ ಶಾಲಾ ಕಾಲೇಜುಗಳಿಗೆ ತೆರಳಿ ತಮ್ಮ ಸಾಧನೆ ಮನವರಿಕೆ ಮಾಡಿಕೊಟ್ಟು ಮತಯಾಚನೆ ಮಾಡಿದ್ದಾರೆ.

ಇಲ್ಲಿನ ವುಮೆನ್ಸ್‌ ಕಾಲೇಜಿನಲ್ಲಿ ಮಾತನಾಡಿದ ಹೊರಟ್ಟಿ, 1980ರಲ್ಲಿ ಮೊದಲ ಬಾರಿ ಚುನಾವಣೆ ಎದುರಿಸಿದ್ದೆ. ಅಲ್ಲಿಂದ ಇಲ್ಲಿವರೆಗೂ ಶಿಕ್ಷಕರು ಅದೇ ಪ್ರೀತಿ, ವಿಶ್ವಾಸವನ್ನು ತೋರುತ್ತಿದ್ದಾರೆ. ಎರಡು ತಲೆಮಾರಿನ ಶಿಕ್ಷಕರು ನನ್ನನ್ನು ನಂಬಿ ಮತ ನೀಡಿದ್ದಾರೆ. ಪ್ರಚಾರಕ್ಕೆ ಹೋದ ಹಲವೆಡೆ ಶಿಕ್ಷಕಿಯರು ಹಿಂದಿನ ಕಷ್ಟನೆನೆದು ಕಣ್ಣೀರು ಹಾಕಿದ್ದಿದೆ. ಅವರ ನಂಬಿಕೆ ಉಳಿಸಿಕೊಂಡ ಕಾರಣದಿಂದಲೆ ಸತತ ಏಳು ಬಾರಿ ಗೆಲ್ಲಲು ಕಾರಣವಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್