ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ: ಜಗದೀಶ್‌ ಶೆಟ್ಟರ್‌

Published : Jun 24, 2023, 12:52 PM IST
ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ: ಜಗದೀಶ್‌ ಶೆಟ್ಟರ್‌

ಸಾರಾಂಶ

ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಎಂಬುದು ಗೊತ್ತಿಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ ಎಂದು ನೂತನ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. 

ಹುಬ್ಬಳ್ಳಿ (ಜೂ.24): ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಎಂಬುದು ಗೊತ್ತಿಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ ಎಂದು ನೂತನ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್‌ನಲ್ಲಿ ಜನಪ್ರತಿನಿಧಿಯಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ನನಗೊಂದು ಅವಕಾಶ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ, ರಾಜ್ಯದ ನಾಯಕರಿಗೆ ಧನ್ಯವಾದವನ್ನ ಸಲ್ಲಿಸುತ್ತೇನೆ. 

ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಎಂದು ಹೇಳಿದರು. ಪರಿಷತ್ ಸದಸ್ಯನಾಗಿ ಆಯ್ಕೆಯಾಗಿದ್ದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಪರಿಷತ್‌ನಲ್ಲಿ ಚರ್ಚೆ ಮಾಡುತ್ತೇನೆ. ಈ ಭಾಗದ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ನೆನಗುದಿಗೆ ಬಿದ್ದಿವೆ, ಅವುಗಳನ್ನ ಆದಷ್ಟು ಬೇಗ ಪರಿಹಾರ ಮಾಡಲಿಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ. ರಾಜಕೀಯದಲ್ಲಿ ಬೇರೆ ಬೇರೆ ಅಧ್ಯಾಯಗಳಿರ್ತಾವೆ. ಇದು ನನ್ನ ಹೊಸ ಅಧ್ಯಾಯ, ಎರಡನೆಯ ಇನ್ನಿಂಗ್ಸ್. 

ಶಕ್ತಿ ಯೋಜನೆ: ಚಿಕ್ಕಮಗಳೂರಿನ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ!

ವಿಧಾನ ಪರಿಷತ್‌ ಸದಸ್ಯ ಮಾಡುವಾಗ ಕಾಂಗ್ರೆಸ್ ಜಗದೀಶ್ ಶೆಟ್ಟರ್‌ಗೆ ಇನ್ನೂ ‌ಉನ್ನತ ಸ್ಥಾನಮಾನಗಳನ್ನು ನೀಡತ್ತೆ ಎಂದು ಹೇಳಿದೆ. ಸಭಾಪತಿ ಮಾಡುವುದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ, ಸಭಾಪತಿ ನೀಡುವ ವಿಷಯವನ್ನು ನಮ್ಮ ಪಕ್ಷ ಪ್ರಸ್ತಾಪ ಮಾಡಿಲ್ಲ. ವೇಟ್ & ಸಿ, ನಾನು ಕಾಯ್ದು ನೋಡುತ್ತೇನೆ. ನೋಡೋಣ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ನಮ್ಮ ಪಕ್ಷದ ವರಿಷ್ಠರ ಜತೆಗೆ ಚರ್ಚೆ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಎಲ್ಲಿಯೇ ಪ್ರವಾಸ ಮಾಡಿ ಅಂದರೂ  ನಾನು ನನ್ನ‌ ಸಮಯವನ್ನ ಕೋಡ್ತಿನಿ. 

ಹಾಲು ದರ 5 ರೂ ಹೆಚ್ಚಾಗಬೇಕು, ಇದು ನನ್ನ ವೈಯಕ್ತಿಕ ಅಭಿಪ್ರಾಯ: ಸಚಿವ ರಾಜಣ್ಣ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗೆಲ್ಲಲು ನಾನೂ ಪ್ರಯತ್ನ ಮಾಡ್ತೇನಿ. ಈ ಚುನಾವಣೆಯಲ್ಲಿ ನಿಮ್ಮ‌ ಉಪಯೋಗ ತೆಗೆದುಕೊಳ್ಳುತ್ತೆವೆ ಎಂದು ನಮ್ಮ‌ ಪಕ್ಷ ಹೇಳಿದೆ. ಉತ್ತರ ಕರ್ನಾಟಕದಲ್ಲಿ 11 ಲೋಕಸಭಾ ಕ್ಷೇತ್ರಗಳು ಬರ್ತಾವೆ. ಅದರಲ್ಲಿ 6-7 ಕ್ಷೇತ್ರದಲ್ಲಿ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ನಮಗೆ ಈಗಾಗಲೇ ಜನರಿಂದ ಬೆಂಬಲ ಸಿಗುತ್ತಿದೆ. ಒಳ ಒಪ್ಪಂದ ಮಾಡಿದವರು ಯಾರು, ಅವರ ಹೆಸರನ್ನ ಪ್ರತಾಪ್ ಸಿಂಹ ಬಹಿರಂಗ ಪಡಿಸಲಿ. ಪಕ್ಷದ ನಾಲ್ಕು ಗೋಡೆಗಳ ಮಧ್ಯ ಚರ್ಚೆ ಮಾಡುವ ವಿಚಾರವನ್ನ ಅವರು ಬಹಿರಂಗ ಮಾಡಿದ್ದಾರೆ. ಬಹಿರಂಗವಾಗಿ ಅವರ ಹೆಸರನ್ನ ಹೇಳಿಬಿಡಲಿ. ಅವರ್ಯಾರು ಎಂಬುದು ಜನರಿಗೆ ಗೊತ್ತಾಗಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ