ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆಸಿ ರಾಮಮೂರ್ತಿ ಬಿಜೆಪಿಗೆ ಸೇರ್ಪಡನೆಯಾದ ಪರಿಣಾಮ ತೆರವಾಗಿದ್ದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲು ಆಯೋಗ ದಿನಾಂಕ ಪ್ರಕಟಿಸಿದೆ.
ನವದೆಹಲಿ (ನ.14): ಕರ್ನಾಟಕದ ಒಂದು ಸ್ಥಾನದ ಜೊತೆಗೆ ಉತ್ತರ ಪ್ರದೇಶದ ಒಂದು ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಕೇಂದ್ರ ಚುನಾವಣೆ ಆಯೋಗ ದಿನಾಂಕ ನಿಗದಿಪಡಿಸಿದೆ.
ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾಗಿದ್ದ ಕೆಸಿ ರಾಮಮೂರ್ತಿ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡಯಾದ್ದರು. ಇನ್ನು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ತಜೀಮಾ ಫತ್ಮಾ ವಿಧಾನಸಭಾ ಚುನಾವಣಾ ಚುನಾವಣೆಗೆ ಸ್ಪರ್ಧೆ ಮಾಡಲು ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಾಂಗ್ರೆಸ್ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ
ತೆರವಾಗಿರುವ ಈ ಎರಡು ಸ್ಥಾನಗಳಿಗೆ ಡಿ. 2 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ರೆ, ಡಿ.3ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ಇನ್ನು ಡಿ.5 ನಾಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಡಿ.12ರಂದು ಚುನಾವಣೆ ನಡೆಯಲಿದ್ದು, ಅಂದೇ ಸಂಜೆ 5ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಐಪಿಎಸ್ ಅಧಿಕಾರಿಯಾಗಿದ್ದ ಕೆ.ಸಿ.ರಾಮಮೂರ್ತಿ ಅವರು ಕಾಂಗ್ರೆಸ್ 2016ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು.
ಕಾಂಗ್ರೆಸ್ಗೆ ರಾಜೀನಾಮೆ: ಕಾರಣದ ಜತೆಗೆ ಮಹತ್ವದ ಸುಳಿವು ಕೊಟ್ಟ ರಾಮಮೂರ್ತಿ
ನರೇಂದ್ರ ಮೋದಿಯವರ ಆಡಳಿತ ಮೆಚ್ಚಿ ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು.