
ನವದೆಹಲಿ/ಬೆಂಗಳೂರು, (ಜೂನ್.01): ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣೆ ಆಯೋಗ ಎಲೆಕ್ಷನ್ ದಿನಾಂಕವನ್ನು ಘೋಷಣೆ ಮಾಡಿದೆ.
ಜೂನ್ 19 ರಂದು ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಾಂಗ್ರೆಸ್-ಜೆಡಿಎಸ್ ಮತ್ತೆ ದೋಸ್ತಿ: ದೇವೇಗೌಡರ ಮುಂದೆ ಬಂಪರ್ ಆಫರ್...!
ಕರ್ನಾಟಕದ ರಾಜ್ಯಸಭೆ ಸದಸ್ಯರುಗಳಾದ ಪ್ರೊ. ಎಂ.ವಿ.ರಾಜೀವ್ ಗೌಡ (ಕಾಂಗ್ರೆಸ್), ಬಿ.ಕೆ.ಹರಿಪ್ರಸಾದ್ (ಕಾಂಗ್ರೆಸ್), ಡಾ. ಪ್ರಭಾಕರ್ ಕೋರೆ (ಬಿಜೆಪಿ), ಡಿ. ಕುಪೇಂದ್ರ ರೆಡ್ಡಿ (ಜೆಡಿಎಸ್) ಅವರಿಂದ ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ವಿಧಾನಸಭಾ ಸದಸ್ಯರು (MLA) ಮತದಾನ ಮಾಡಲಿದ್ದಾರೆ.
ಚುನಾವಣೆ ಪ್ರಕ್ರಿಯೆ
* ಜೂನ್ 9- ನಾಮಪತ್ರ ಸಲ್ಲಿಸಲು ಕೊನೆ ದಿನ
* ಜೂನ್ 10- ನಾಮಪತ್ರ ಪರಿಶೀಲನೆ
* ಜೂನ್ 12- ನಾಮಪತ್ರ ಹಿಂಪಡೆಯಲು ಕೊನೆ ದಿನ
* ಜೂನ್ 19- ಮತದಾನ (ಬೆಳಗ್ಗೆ 9ರಿಂದ ಸಂಜೆ4ರ ವರೆಗೆ
*ಅಂದೇ ಅಂದ್ರೆ ಜೂನ್ 19ರ ಸಂಜೆ 5ಗೆ ಮತದಾನ ಎಣಿಕೆ
* ಜೂನ್ 22ರ ವೇಳೆ ಎಲ್ಲಾ ಪ್ರಕ್ರಿಯೆ ಮುಗಿಯಲಿವೆ.
ಇನ್ನು ಆಂಧ್ರಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ 4 ಸ್ಥಾನಗಳು, ಜಾರ್ಖಂಡ್ 2, ಮಧ್ಯಪ್ರದೇಶ 3, ಮಣಿಪುರ್ ಮತ್ತು ಮೇಘಾಲಯ ತಲಾ 1 ಸೀಟುಳಿಗೆ ಗೆ ಜೂನ್ 19ರಂದೇ ಚುನಾವಣೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.