
ನವದೆಹಲಿ(ಮಾ.29): ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮೇ.10 ರಂದ ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನು ಮೇ.13 ರಂದು ಫಲಿತಾಂಶ ಘೋಷಣೆಯಾಗಲಿದೆ. ಚುನಾವಣಾ ಆಯೋಗ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ. ಇತ್ತ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಆಯೋಗ, 4 ರಾಜ್ಯಗಳ ಉಪ ಚುನಾವಣೆ ದಿನಾಂಕವನ್ನು ಘೋಷಿಸಲಾಗಿದೆ. ಉತ್ತರ ಪ್ರದೇಶ, ಒಡಿಶಾ, ಪಂಜಾಬ್ ಹಾಗೂ ಮೆಘಾಲಯದ ಉಪ ಚುನಾವಣೆ ದಿನಾಂಕವೂ ಘೋಷಣೆಯಾಗಿದೆ. ಈ ಉಪ ಚುನಾವಣೆ ಕೂಡ ಮೇ. 10 ರಂದು ನಡೆಯಲಿದೆ. ಮೇ.13ಕ್ಕೆ ಫಲಿತಾಂಶ ಹೊರಬೀಳಲಿದೆ.
ಜಲಂಧರ್ ಲೋಕಸಭಾ ಸ್ಥಾನ, ಪಂಜಾಬ್ನ ಜಾರ್ಸುಗುಡಾ-7 ವಿಧಾನಸಭಾ ಸ್ಥಾನ, ಒಡಿಶಾದ 395- ಛಾನ್ಬೇ, ಉತ್ತರ ಪ್ರದೇಶದ ಸೌರ್ 34 ಹಾಗೂ ಮೆಘಾಲಯದ ಶಿಲ್ಲಾಂಗ್ 23 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಕರ್ನಾಟಕದ ವಿಧಾನಸಭಾ ಚುನಾವಣೆ ದಿನದಂದೇ ಈ ಉಪಚುನಾವಣೆ ನಡಯಲಿದೆ ಎಂದು ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ.
Karnataka Elections 2023: ಪ್ರತಿಪಕ್ಷಗಳ ಮನವಿ ಒಪ್ಪಿದ ಆಯೋಗ, ರಾಜ್ಯದಲ್ಲಿ ಒಂದೇ ಹಂತದಲ್ಲಿ 'ಮೇ'ಗಾ ಎಲೆಕ್ಷನ್!
ಉಪ ಚುನಾವಣಾ ವಿವರವನ್ನು ಸುದ್ದಿಗೋಷ್ಠಿಯಲ್ಲಿ ರಾಜೀವ್ ಕುಮಾರ್ ನೀಡಿದ್ದಾರೆ. ಉಪ ಚುನಾವಣೆಗೆ ಎಪ್ರಿಲ್ 13 ರಂದು ಗಜೆಟ್ ನೋಟಿಫಿಕೇಶ್ ಹೊರಡಿಸಲಾಗುತ್ತದೆ. ಎಪ್ರಿಲ್ 20ಕ್ಕೆ ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನು ಎಪ್ರಿಲ್ 21 ರಂದು ನಾಮಪತ್ರ ಪರಿಶೀಲನೆಗೆ ಕೊನೆಯ ದಿನವಾಗಿದೆ. ಎಪ್ರಿಲ್ 24 ನಾಪ ಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.ಮೇ.10 ರಂದ ಉಪಚುನಾವಣೆ ನಡೆದರೆ, ಮೇ. 13ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಾದರೆ, ಉತ್ತರ ಪ್ರದೇಶ, ಪಂಜಾಬ್, ಮೆಘಾಲಯ ಹಾಗೂ ಒಡಿಶಾದಲ್ಲಿ ಉಪ ಚುನಾವಣೆ ಕಾವು ಶುರುವಾಗಿದೆ. ನೀತಿ ಸಂಹಿತಿ ಜಾರಿಯಾಗಿದೆ. ಇತ್ತ ಪೊಲೀಸರು ಕರ್ನಾಟಕದ ಹಲವು ಭಾಗದಲ್ಲಿ ನಾಕಾಬಂಧಿ ಹಾಕಿದ್ದಾರೆ. ಎಲ್ಲರ ತಪಾಸಣೆ ಮಾಡುತ್ತಿದ್ದಾರೆ.
Karnataka Elections 2023: ನೀತಿ ಸಂಹಿತೆ ಜಾರಿ ಬೆನ್ನಲ್ಲಿಯೇ ಶಿವಮೊಗ್ಗದಲ್ಲಿ 4 ಲಕ್ಷ ರೂಪಾಯಿ ವಶ!
ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಅನ್ನೋ ಆರೋಪ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪದೇ ಪದೇ ಮಾಡುತ್ತಿದೆ. ಹೀಗಾಗಿ ಈ ಬಾರಿ ಚುನಾವಣಾ ಆಯೋಗ ಮತ್ತಷ್ಟು ಕಟ್ಟು ನಿಟ್ಟಾಗಿ ಹಾಗೂ ಯಾವುದೇ ಅಡೆತಡೆ ಇಲ್ಲದೆ ಚುನಾವಣೆ ನಡೆಸಲು ನಿರ್ಧರಿಸಿದೆ.ಆರೋಪಗಳಿಗೆ ಉತ್ತರಿಸಿರುವ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಯಾರ ಒತ್ತಡ ಇಲ್ಲ ಸ್ವತಂತ್ರವಾಗಿ ಆಯೋಗ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.