
ಬೆಂಗಳೂರು, (ಜೂನ್. 09): ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಇಂದು (ಮಂಗಳವಾರ) ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಜೂನ್ 29 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಜೂನ್ 18 ರ ವರೆಗೆ ಅವಕಾಶ ಇದ್ದು, ಜೂನ್ ಜೂನ್ 22 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.
ರಾಜ್ಯದಲ್ಲಿ ನಡೆಯಬೇಕಿದ್ದ ವಿಧಾನಪರಿಷತ್ ಚುನಾವಣೆ ಮುಂದೂಡಿಕೆ...!
ಪಕ್ಷಗಳ ಸಂಖ್ಯಾಬಲ ಆಧಾರದ ಮೇಲೆ ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1 ಸ್ಥಾನ ಗೆಲ್ಲಬಹುದಾಗಿದೆ.
ಇನ್ನು ಕೋವಿಡ್ -19 ಭೀತಿ ಹಿನ್ನೆಲೆಯಲ್ಲಿ ಶಿಕ್ಷಕರ ಕ್ಷೇತ್ರ ಹಾಗೂ ಪದವಿದರ ನಾಲ್ಕು ಸ್ಥಾನಗಳಿಗೆ ಈ ತಿಂಗಳ ನಂತರ ನಡೆಯಬೇಕಾಗಿದ್ದ ಚುನಾವಣೆಯನ್ನು ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.