ಕರ್ನಾಟಕ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆ

Published : May 12, 2022, 03:04 PM ISTUpdated : May 12, 2022, 03:26 PM IST
ಕರ್ನಾಟಕ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆ

ಸಾರಾಂಶ

* ರಾಜ್ಯ ಸಭೆ ಚುನಾವಣೆ ಘೋಷಣೆ..  * ರಾಜ್ಯದ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ * ಜೂನ್  10 ರಂದು ಚುನಾವಣೆ

ಬೆಂಗಳೂರು, (ಮೇ.12): ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 

ರಾಜ್ಯದ 4 ಸ್ಥಾನಗಳಿಗೆ ಜೂನ್  10 ರಂದು ಚುನಾವಣೆ ನಡೆಯಲಿದ್ದು,  ಅಂದೇ (ಜೂನ್ 10) ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.
ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ,  ಜೈರಾಂ ರಮೇಶ್ ನಿವೃತ್ತಿ ಹಾಗೂ ಈಗಾಗಲೇ ಆಸ್ಕರ್ ಫರ್ನಾಂಡೀಸ್ ನಿಧನದಿಂದ ತೆರವಾಗಿರುವ ಒಂದು ಸ್ಥಾನ ಸೇರಿದಂತೆ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ.

ಕರ್ನಾಟಕದ 7 ವಿಧಾನಪರಿಷತ್‌ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆ 

ಕರ್ನಾಟಕದಿಂದ ರಾಜ್ಯಸಭೆ ಆಯ್ಕೆಯಾಗಿದ್ದ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರ ಅವಧಿ ಇದೇ ಜೂನ್ 30ರಂದು ಮುಗಿಯಲಿದೆ. ಈ ಸ್ಥಾನಗಳಿಗೆ ದಿನಾಂಕ 10-06-2022ರಂದು ಚುನಾವಣೆ ನಿಗದಿಗೊಳಿಸಲಾಗಿದೆ.

ಮೇ 24ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ. 01ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

 ಜೂನ್ 03ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.ಜೂನ್ 10 ರಂದು ಮತದಾನ ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದ್ದು, ಅಂದೇ  ಸಂಜೆ 5 ಗಂಟೆಗೆ ಮತಏಣಿಕೆ ನಡೆಯಲಿದೆ.

ವಿಧಾನಪರಿಷತ್‌ಗೂ ಚುನಾವಣೆ ಘೋಷಣೆ
ಇನ್ನೂ ಕರ್ನಾಟಕದ  2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳ ಸ್ಥಾನಗಳಿ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ನಡೆಯಲಿದೆ. ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ, ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ ಅವರ ಅವಧಿ ಜುಲೈ 4ಕ್ಕೆ ಮುಗಿಯಲಿದೆ. ಈ ಸ್ಥಾನಗಳಿಗೆ  ಇದೇ ಜೂನ್ 13ರಂದು  ಚುನಾವಣೆ ನಡೆಯಲಿದೆ.

ಮೇ. 26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ. 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ಮೇ. 30 ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.  ದಿನಾಂಕವಾಗಿದೆ. ದಿನಾಂಕ ಜೂನ್, 13ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ  ಮತದಾನ ನಡೆಯಲಿದ್ದು, ಜೂ.15 ಫಲಿತಾಂಶ ಪ್ರಕಟವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್