ಜೆಡಿಎಸ್‌ ಬಲವರ್ಧನೆಗೆ ಪ್ರಶಾಂತ್‌ ಕಿಶೋರ್‌ ರಣತಂತ್ರ!

Published : Feb 26, 2020, 08:00 AM IST
ಜೆಡಿಎಸ್‌ ಬಲವರ್ಧನೆಗೆ ಪ್ರಶಾಂತ್‌ ಕಿಶೋರ್‌ ರಣತಂತ್ರ!

ಸಾರಾಂಶ

ಜೆಡಿಎಸ್‌ ಬಲವರ್ಧನೆಗಾಗಿ ಪ್ರಶಾಂತ್‌ ಕಿಶೋರ್‌ ರಣತಂತ್ರ| ಟಾರ್ಗೆಟ್‌ 2023: ಚುನಾವಣೆ ತಂತ್ರಗಾರನ ಮೊರೆಹೋದ ಎಚ್‌ಡಿಕೆ

ಬೆಂಗಳೂರು[ಫೆ.26]: ಚುನಾವಣಾ ತಂತ್ರಗಾರಿಕೆಗಳ ನಿಪುಣ ಎಂದೇ ಖ್ಯಾತಿ ಪಡೆದಿರುವ ಪ್ರಶಾಂತ್‌ ಕಿಶೋರ್‌ ಅವರನ್ನು ಜೆಡಿಎಸ್‌ ಬಲವರ್ಧನೆಗಾಗಿ ಕರೆತರಲು ಚಿಂತನೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದಾರೆ.

ಮುಂಬರುವ 2023ರ ವಿಧಾನಸಭೆ ಚುನಾವಣೆ ವೇಳೆಗೆ ಪಕ್ಷವನ್ನು ಬಲಗೊಳಿಸಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪ್ರಶಾಂತ್‌ ಕಿಶೋರ್‌ ಅವರ ರಣತಂತ್ರವನ್ನು ಬಳಕೆ ಮಾಡಿಕೊಳ್ಳುವ ಮೂಲಕ ಹೊಸ ಪ್ರಯೋಗಕ್ಕೆ ಕುಮಾರಸ್ವಾಮಿ ಒಲವು ವ್ಯಕ್ತಪಡಿಸಿದ್ದಾರೆ. ಪ್ರಶಾಂತ್‌ ಕಿಶೋರ್‌ ಜತೆ ಮಾತುಕತೆ ನಡೆಸಿರುವ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಮಾಹಿತಿಯನ್ನೂ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಗೆ ಚುನಾವಣಾ ತಂತ್ರಗಾರಿಕೆ ರೂಪಿಸುವ ಸಂಬಂಧ ಚುನಾವಣಾ ಚತುರ ಪ್ರಶಾಂತ್‌ ಕಿಶೋರ್‌ ಜತೆ ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದೆ. ಅವರೊಂದಿಗೆ ಪ್ರಾಥಮಿಕ ಹಂತದ ಚರ್ಚೆಯಾಗಿದೆ. ಮುಂದಿನ ದಿನದಲ್ಲಿ ಅವರಿಂದ ಸಲಹೆ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಿಖಿಲ್‌ ಮದುವೆಗೆ ಮೋದಿಗೆ ಆಹ್ವಾನ

ಪುತ್ರ ನಿಖಿಲ್‌ ಕುಮಾರಸ್ವಾಮಿ ವಿವಾಹ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ರಾಮನಗರದಲ್ಲಿ ಮದುವೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಮದುವೆ ಆಮಂತ್ರಣ ವಿತರಣೆ ಮಾಡುವ ಕೆಲಸ ಇನ್ನೂ ಪ್ರಾರಂಭಿಸಿಲ್ಲ. ಎಲ್ಲ ಗಣ್ಯರನ್ನೂ ಮದುವೆಗೆ ಆಹ್ವಾನಿಸಲಾಗುವುದು. ಸಾಧ್ಯವಾದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲಾ-ಕಾಲೇಜು ಹುಡುಗಿಯರಿಗೂ ಋತುಚಕ್ರ ರಜೆ?: ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ಸಾಧ್ಯತೆ
ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ