ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್

Published : Sep 08, 2020, 07:55 PM ISTUpdated : Sep 08, 2020, 07:59 PM IST
ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್

ಸಾರಾಂಶ

ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಆಯೋಗ ಹಸಿರು ನಿಶಾನೆ ತೋರಿದ್ದು, ಎಲೆಕ್ಷನ್‌ಗೆ ದಿನಾಂಕದ ಸುತ್ತೋಲೆಯನ್ನು ಹೊರಡಿಸಿದೆ.

ಬೆಂಗಳೂರು, (ಸೆ.08) ಕೊರೋನಾ ಭೀತಿ ಮಧ್ಯೆ ರಾಜ್ಯದ ಪ್ರಾಥಮಿಕ, ಮಾಧ್ಯಮಿಕ, ಫೆಡರಲ್ ಸಹಕಾರ ಸಂಘಗಳ ಚುನಾವಣೆಗೆ  ಮುಹೂರ್ತ ಫಿಕ್ಸ್ ಆಗಿದೆ.

ದಿನಾಂಕ 15-11-2020ರೊಳಗಾಗಿ ಚುನಾವಣೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ರಾಜ್ಯದ ಎಲ್ಲಾ ಪ್ರಾಥಮಿಕ, ಮಾಧ್ಯಮಕಿ ಹಾಗೂ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ ಮತ್ತೊಂದು ಚುನಾವಣೆ: ಮೀಸಲಾತಿ ಪ್ರಕಟ

ಈಗಾಗಲೇ ಸಹಕಾರ ಸಂಘಗಳ ಪದಾವಧಿ ಮುಗಿದಿದ್ದಲ್ಲಿ ಮತ್ತು ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿರುವಂತಹ ಸಹಕಾರ ಸಂಘಗಳ ಚುನಾವಣಾ ಪ್ರಕ್ರಿಯೆಗಳನ್ನು ದಿನಾಂಕ 13-07-2020ರಂದು ಯಾವ ಹಂತದಲ್ಲಿದ್ದವೋ ಆ ಹಂತದಿಂದ ಚುನಾವಣಾ ಪ್ರಕ್ರಿಯೆಗಳ್ನು ಮುಂದುವರೆಸಿ, ದಿನಾಂಕ 15-11-2020ರೊಳಗಾಗಿ ಚುನಾವಣೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

ಇದರೊಂದಿಗೆ ರಾಜ್ಯದ ಎಲ್ಲಾ ಪ್ರಾಥಮಿಕ, ಮಾಧ್ಯಮಿಕ ಹಾಗೂ ಫೆಡರಲ್ ಸಹಕಾರ ಸಂಘಗಳ ಆಡಳಿತ ಮಂಡಳಿ ಪದಾವದಿ ಮುಕ್ತಾಯಗೊಳ್ಳುವ ಸಂದರ್ಭಕ್ಕನುಗುಣವಾಗಿ ಪದಾವಧಿ ಮುಗಿಯುವ 15 ದಿನಕ್ಕೆ ಮುಂಚಿತವಾಗಿ ಚುನಾವಣೆಗಳನ್ನು ಪೂರ್ಣಗೊಳ್ಳಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್