
ಮುಂಬೈ (ಸೆ. 09) ಬಾಲಿವುಡ್ ನಟಿ ಕಂಗನಾ ರಾಣಾವತ್ ಸೇರಿದ್ದ ಕಟ್ಟಡದ ಒಂದು ಭಾಗವನ್ನು ಮಹಾರಾಷ್ಟ್ರ ಸರ್ಕಾರ ನೆಲಸಮ ಮಾಡಿದೆ. ಆದರೆ ಇದೇ ವಿಚಾರವನ್ನು ಎನ್ಸೊಪಿ ನಾಯುಕ ಶರದ್ ಪವಾರ್ ಪ್ರಶ್ನೆ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್ ಮತ್ತು ಎನ್ ಸಿಪಿ ಒಟ್ಟಾಗಿ ಸರ್ಕಾರ ರಚನೆ ಮಾಡಲು ಪವಾರ್ ಪಾತ್ರ ಬಹಳ ದೊಡ್ಡದು. ಇದೀಗ್ ಪವಾರ್ ಸಿಎಂ ಉದ್ಧವ್ ಠಾಕ್ರೆ ವಿರುದ್ಧವೇ ಮಾತನಾಡಿದ್ದಾರೆ. ಇನ್ನು ಮುಂದೆ ಇದು ಯಾಔ ರಾಜಕಾರಣದ ತಿರುವು ಪಡೆದುಕೊಳ್ಳುತ್ತದೆ ಎಂದುದನ್ನು ಕಾದು ನೋಡಬೇಕಿದೆ.
ಕಂಗನಾಳ ಕಚೇರಿ ಮೇಲೆ ಬುಲ್ಡೋಜರ್ ಹತ್ತಿಸಿದ ಸರ್ಕಾರ
ಕಂಗನಾ ರಣಾವತ್ ಕಟ್ಟಡದವನ್ನು ಮಾತ್ರ ಯಾಕೆ ನೆಲಸಮ ಮಾಡಲಾಗಿದೆ? ಮುಂಬೈನಲ್ಲಿ ಅಕ್ರಮ ಕಟ್ಟಡಗಳು ಸಾಕಷ್ಟಿದ್ದು ಎಲ್ಲದರ ಮೇಲೆ ಕ್ರಮ ಯಾಕಿಲ್ಲ? ಜನರು ಸೋಶಿಯಲ್ ಮೀಡಿಯಾದಲ್ಲಿ ಟೀಕೆ ಮಾಡಲು ನಾವೇ ಆಹಾರ ಮಾಡಿಕೊಟ್ಟಂತಾಗಿದೆ ಎಂದು ಪವಾರ್ ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಕಂಗನಾ ಇಡೀ ಬಾಲಿವುಡ್ ಮಾಫಿಯಾ ಮತ್ತು ಮಹಾ ಸರ್ಕಾರವನ್ನೇ ಎದುರು ಹಾಕಿಕೊಂಡು ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಮುಂದಾಗಿ ಕಂಗನಾಗೆ ಭದ್ರತೆ ಒದಗಿಸಿತ್ತು. ಶಿವಸೇನೆ ನಾಯಕ ಮತ್ತು ಕಂಗನಾ ನಡುವೆ ಜಟಾಪಟಿಯೂ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.