ಜಗದೀಶ್ ಶೆಟ್ಟರ್ ಬಿಟ್ಟು ಹೋದ್ರೂ ಪಕ್ಷಕ್ಕೇನು ನಷ್ಟವಿಲ್ಲ: ಸಿಎಂ ಬೊಮ್ಮಾಯಿ ತಿರುಗೇಟು

Published : Apr 16, 2023, 08:28 PM IST
ಜಗದೀಶ್ ಶೆಟ್ಟರ್ ಬಿಟ್ಟು ಹೋದ್ರೂ ಪಕ್ಷಕ್ಕೇನು ನಷ್ಟವಿಲ್ಲ: ಸಿಎಂ ಬೊಮ್ಮಾಯಿ ತಿರುಗೇಟು

ಸಾರಾಂಶ

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ಯಾವುದೇ ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯನಗರ (ಏ.16): ಜಗದೀಶ್ ಶೆಟ್ಟರ್ ಅವರ ಫ್ಲೈಟ್ ಎಲ್ಲಿ ಹೋಗ್ತದೆ ಅನ್ನೋದು ಮುಖ್ಯ ಅಲ್ಲ. ಅವರ ಡೆಸ್ಟಿನೇಷನ್ ಮುಖ್ಯ. ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದರಿಂದ ಯಾವುದೇ ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹೊಸಪೇಟೆಯಲ್ಲಿ ಆನಂದ್‌ ಸಿಂಗ್‌ ಪುತ್ರ ಸಿದ್ದಾರ್ಥ ಸಿಂಗ್ ಪರವಾಗಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್ ಅವರು ಬಿಜೆಪಿ ತೊರೆಯುತ್ತಿರುವ ಕುರಿತು ಇದೇ ಮೊದಲ ಬಾರಿಗೆ ಖಾರವಾಗಿ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಅವರ ಫ್ಲೈಟ್ ಎಲ್ಲಿ ಹೋಗ್ತದೆ ಅನ್ನೋದು ಮುಖ್ಯ ಅಲ್ಲ. ಬಿಜೆಪಿಯಲ್ಲಿ ಮೋದಿಯವರು ಕಾಲ ಕಾಲಕ್ಕೆ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡೋ ಧೈರ್ಯ ಮೋದಿ ಮತ್ತು ಬಿಜೆಪಿಗೆ ಮಾತ್ರ ಇದೆ ಎಂದು ಹೇಳಿದರು.

ನಿಮಗೆಲ್ಲಾ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಶೆಟ್ಟರ್‌, ಸವದಿ ವಿರುದ್ಧ ಯತ್ನಾಳ್ ಕೆಂಡ

ಸವೀಕ್ಷೆಯ ವರದಿ ಆಧರಿಸಿ ಟಿಕೆಟ್ ನಿರಾಕರಣೆ: ಹಲವು ಸಮೀಕ್ಷೆ ಮತ್ತು ಬೇರೆ ಬೇರೆ ಕಾರಣಗಳಿಗೆ ಜಗದೀಶ್‌ ಶೆಟ್ಟರ್ ಅವರು ಸ್ಪರ್ಧಿಸಬೇಕಿದ್ದ ಕ್ಷೇತ್ರದಲ್ಲಿ ಟಿಕೆಟ್‌ ನಿಡವುದು  ಬದಲಾವಣೆ ಆಗಿದೆ. ಪಕ್ಷಕ್ಕೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಕೆಲವು ಹಿರಿಯರು ತಾವೇ ನಿವೃತ್ತಿ ಘೋಷಣೆ ಮಾಡಿ ನಿವೃತ್ತಿ ಹೊಂದಿದ್ದಾರೆ. ಆನಂದಸಿಂಗ್ ಗೆ ವಯಸ್ಸು ಇತ್ತು. ಅವರ ಜೊತೆ ಈಶ್ವರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಸ್. ಯಡಿಯೂರಪ್ಪ ಯುವಕರಿಗೆ ಅವಕಾಶ ಮಾಡಿಕೊಟ್ಟರು. ಶೆಟ್ಟರ್ ಸಹ ಯುವಕರಿಗೆ ಅವಕಾಶ ಮಾಡಿಕೊಡಬೇಕಾಗಿತ್ತು. ಅವರಿಗೆ ಪಕ್ಷ ದೆಹಲಿ ಮಟ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಡುವ ಭರವಸೆ ನೀಡಿದ್ದರು. ಪಕ್ಷ ಅವರಿಗೆ ದೊಡ್ಡ ಸ್ಥಾನಮಾನಗಳನ್ನ ಕೊಟ್ಟಿದೆ. ಅವರ ಶಾಸಕರಾಗಲು ಸಾವಿರಾರು ಕಾರ್ಯಕರ್ತರ ಶ್ರಮವಿದೆ. ಇತಂಹ ನಾಯಕರು ಯಾರೇ ಪಕ್ಷ ಬಿಟ್ಟು ಹೋದರೂ ಅವರಿಂದ ಯಾವುದೇ ನಷ್ಟವಿಲ್ಲ ಎಂದು ಹೇಳಿದರು.

ನಾನಿನ್ನೂ ಪಕ್ಷಕ್ಕೆ ರಾಜಿನಾಮೆ ಕೊಟ್ಟಿಲ್ಲ: ಬಿಜೆಪಿಯಲ್ಲೇ ಉಳಿತಾರಾ ಮಾಜಿ ಸಿಎಂ ಜಗದೀಶ್ ಶೆಟ್ಟರ್!

ಪಕ್ಷ ಬಿಟ್ಟಿದ್ದಕ್ಕೆ ಪಶ್ಚಾತ್ತಾಪ ಪಡ್ತಾರೆ:  ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರುವುದು ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಪಕ್ಷಕ್ಕೆ ಎಲ್ಲವನ್ನೂ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಹೈಕಮಾಂಡ್ ಜೊತೆ ಮಾತನಾಡಿ ಹಕ್ಕಿನಲ್ಲಿ ಸ್ಥಾನಮಾನ ಪಡೆದು ಕೊಳ್ಳಬೇಕಾಗಿತ್ತು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹಂತಹಂತವಾಗಿ ಬದಲಾವಣೆ ಆಗುತ್ತದೆ. ಬಿಜೆಪಿಯಲ್ಲಿ ಲಿಂಗಾಯತರ ಕೋಟೆ ಭದ್ರವಾಗಿದೆ. ಯಡಿಯೂರಪ್ಪ ಅವರು ಹಾಗೂ ನನ್ನ ಸಮೇತವಾಗಿ ಸಾಕಷ್ಟು ನಾಯಕರನ್ನ ಬೆಳಿಸಿದ್ದಾರೆ. ಅವರು ಪಕ್ಷ ಬಿಟ್ಟು ಹೋಗಿರುವುದಕ್ಕೆ ಮುಂದೆ ಪಶ್ಚಾತ್ತಾಪ ಪಡುತ್ತಾರೆ ಎಂದು ಹೇಳಿದರು.

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ