ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಜ್ಯದ ಭವಿಷ್ಯಕ್ಕೆ ಕುತ್ತು : ಎಚ್‍ಡಿಕೆ ಎಚ್ಚರಿಕೆ

Published : Aug 18, 2020, 05:07 PM IST
ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಜ್ಯದ ಭವಿಷ್ಯಕ್ಕೆ ಕುತ್ತು : ಎಚ್‍ಡಿಕೆ ಎಚ್ಚರಿಕೆ

ಸಾರಾಂಶ

ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ರಾಜ್ಯದ ಭವಿಷ್ಯಕ್ಕೆ ಕುತ್ತು ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ

ಬೆಂಗಳೂರು, (ಆ.18): ಖಾಲಿಯಾ ಗಿರುವ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುತ್ತಿಗೆಗೆ ನೀಡಿರುವ ಜಮೀನನ್ನು ಪರಭಾರೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ದುರದೃಷ್ಟಕರ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸರಣಿ ಟ್ವಿಟ್ ಮಾಡಿರುವ ಅವರು, ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ತರಾತುರಿಯಲ್ಲಿ ಅವೈಜ್ಞಾನಿಕ ನಿರ್ಧಾರ ಕೈಗೊಳ್ಳುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಭವಿಷ್ಯಕ್ಕೆ ಮುಳುವಾಗಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಬೆಂಗಳೂರು ಗಲಭೆಗೆ ಟೆರರ್‌ ನಂಟು, ನಿವಾರಣೆಯಾಯ್ತು ಗಣೇಶೋತ್ಸವ ಕಗ್ಗಂಟು: ಆ.18ರ ಟಾಪ್ 10 ಸುದ್ದಿ!

ಗುತ್ತಿಗೆಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನೇ ಇಲ್ಲದಂತಾಗುತ್ತದೆ. ಅಗತ್ಯವಿದ್ದಾಗ ಖಾಸಗಿಯವರ ಎದುರು ಅಂಗಾಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಸುಮಾರು 5 ಸಾವಿರ ಕೋಟಿ ರೂ.ಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನೂ ಕಳೆದುಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!