ಮೇಕೆದಾಟು ಯಾತ್ರೆ ವೇಳೆ ಎಲ್ಲಿಂದ ಕರೆಂಟ್‌ ಪಡೆಯಲಾಗಿತ್ತು?: ಡಿಕೆಶಿ ಹೆಸರೆತ್ತದೆ ಎಚ್‌ಡಿಕೆ ವಾಗ್ದಾಳಿ

Published : Nov 18, 2023, 01:59 PM IST
ಮೇಕೆದಾಟು ಯಾತ್ರೆ ವೇಳೆ ಎಲ್ಲಿಂದ ಕರೆಂಟ್‌ ಪಡೆಯಲಾಗಿತ್ತು?: ಡಿಕೆಶಿ ಹೆಸರೆತ್ತದೆ ಎಚ್‌ಡಿಕೆ ವಾಗ್ದಾಳಿ

ಸಾರಾಂಶ

ಬೆಂಗಳೂರಿನ ಮೆಜೆಸ್ಟಿಕ್‌ ಬಳಿ ಇರುವ ಲುಲು ಮಾಲ್‌ ನಿರ್ಮಾಣಕ್ಕೆ ಮಿನರ್ವ್ ಮಿಲ್‌ನ 24 ಎಕರೆ ಖರಾಬ್‌ ಜಮೀನು ಕಬಳಿಸಿರುವ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಬಗ್ಗೆ ಅಗತ್ಯ ದಾಖಲೆಗಳನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರು (ನ.18): ಬೆಂಗಳೂರಿನ ಮೆಜೆಸ್ಟಿಕ್‌ ಬಳಿ ಇರುವ ಲುಲು ಮಾಲ್‌ ನಿರ್ಮಾಣಕ್ಕೆ ಮಿನರ್ವ್ ಮಿಲ್‌ನ 24 ಎಕರೆ ಖರಾಬ್‌ ಜಮೀನು ಕಬಳಿಸಿರುವ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಈ ಬಗ್ಗೆ ಅಗತ್ಯ ದಾಖಲೆಗಳನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮಾಲ್‌ ಕಟ್ಟಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೆಸರೆತ್ತದೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಭೂಮಿಯ ಬಗ್ಗೆ ಇಷ್ಟೆಲ್ಲ ಮಾತನಾಡುವ ಕಾಂಗ್ರೆಸ್ಸಿಗರು 24 ಎಕರೆ ಖರಾಬ್ ಜಮೀನು ನುಂಗಿ ಹಾಕಿರುವ ಲುಲು ಮಾಲ್ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು. 

ಅವರಿಗೊಂದು ಕಾನೂನು, ನನಗೊಂದು ಕಾನೂನು ಇದೆಯೇ? ಲುಲು ಮಾಲ್ ಇರುವ  24 ಎಕರೆ ಜಾಗ ಖರಾಬ್ ಭೂಮಿ ಆಗಿದೆ. 1934ರಲ್ಲಿ ಮಿನರ್ವ ಮಿಲ್ ಗೆ ಆ ಜಾಗವನ್ನು ನೀಡಲಾಗಿತ್ತು. ಆ ದಾಖಲೆ ಹೇಗೆ ಸುಟ್ಟು ಹಾಕಿದರು ಎನ್ನುವುದು ಗೊತ್ತಿದೆ. ಅಕ್ರಮವಾಗಿ ಖರೀದಿ ಮಾಡಿ ಮಾಲ್ ನಿರ್ಮಿಸಲಾಗಿದೆ.  ಇದೆಲ್ಲವನ್ನೂ ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು. ಲುಲು ಮಾಲ್ ಕೆಳಗಡೆ ಹೈ ಟೆನ್ಷನ್ ವೈರ್ ಅಂಡರ್ ಗ್ರೌಂಡ್ ನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಅದಕ್ಕೆ ಎಷ್ಟು ಹಣ ಕಟ್ಟಿದ್ದಾರೆ? ಸುಜಾತ ಟಾಕೀಸ್ ಮುಂದೆ ಇದ್ದ ಹೈ ಟೆನ್ಷನ್ ವೈರ್ ಹೇಗೆ ಅಂಡರ್ ಗ್ರೌಂಡ್‌ನೊಳಕ್ಕೆ  ಹೋಯಿತು? 

ರಾಜ್ಯದ 5 ಎಸ್ಕಾಂಗಳಲ್ಲಿ ಈ 2 ದಿನ ಆನ್‌ಲೈನ್‌ ಸೇವೆ ಸ್ಥಗಿತ: ಕಾರಣ ಇಲ್ಲಿದೆ?

ಇದನ್ನು ಜನರಿಗಾಗಿ ಮಾಡಿದರಾ ಅಥವಾ ತಮ್ಮ ಸ್ವಾರ್ಥಕ್ಕಾಗಿ ಮಾಡಿದರಾ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ ವಿರುದ್ಧ ಟೀಕಾಪ್ರಹಾರ ನಡೆಸಿದರು. ನಕಲಿ ಸೊಸೈಟಿಯನ್ನು ಅಸಲಿ ಮಾಡಿಕೊಂಡಿದ್ದಾರೆ. ಮೇಲೆ ಇದ್ದ ಹೈ ಟೆನ್ಷನ್ ವೈರ್ ಅನ್ನು ಅಂಡರ್ ಗ್ರೌಂಡ್ ಗೆ ತೆಗೆದುಕೊಂಡು ಹೋಗುವುದು ಇವರಿಗೆ ಕಷ್ಟವೇ?  ಲುಲು ಮಾಲ್ ಮಾತ್ರವೇ ಅಲ್ಲ,  ಮೇಕೆದಾಟು ಪಾದಯಾತ್ರೆ ಮಾಡಿದಾಗ ಎಲ್ಲಿಂದ ವಿದ್ಯುತ್  ತೆಗೆದುಕೊಂಡಿದ್ದರು? ಕನಕಪುರದಲ್ಲಿ ನಡೆಯುವ ʼಕನಕೋತ್ಸವʼಕ್ಕೆ ಕರೆಂಟ್ ಯಾವ ಮೀಟರ್ ನಿಂದ ಪಡೆದುಕೊಂಡಿದ್ದರು? ಅದಕ್ಕೆ ಕರೆಂಟ್ ಬಿಲ್ ಎಷ್ಟು ಕಟ್ಟಿದ್ದಾರೆ? ಈಗ ಯಾರು ದೊಡ್ಡ ಕಳ್ಳ? ಕಣ್ಣಮುಂದೆ ಎಲ್ಲ ವಿಡಿಯೋ ಇದೆ. ಬೇಕಿದ್ದರೆ ಸಾಕ್ಷಿ ಕೊಡೋಣ ಎಂದು ತಿರುಗೇಟು ನೀಡಿದರು.

ಯಡಿಯೂರಪ್ಪ ಅಭಿಪ್ರಾಯದಂತೆ ವಿಪಕ್ಷ ನಾಯಕನಾಗಿ ಅಶೋಕ್‌ ನೇಮಕ!

ಸಚಿವರೊಬ್ಬರಿಂದ ಕೆರೆ ಕಬಳಿಕೆ: ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಬೇಕು ಎಂದು ಸಚಿವರೊಬ್ಬರು ಅಪ್ಪಣೆ ಕೊಡಿಸಿದ್ದಾರೆ. ಆದರೆ, ಅವರು ಒಂದು ಕೆರೆಯನ್ನೇ ನುಂಗಿ ನೀರು ಕುಡಿದಿದ್ದಾರೆ. ಅದಕ್ಕೆ ಯಾವ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಮಹಾ ನಾಯಕರೊಬ್ಬರು ದಾಸನಪುರ ಹೋಬಳಿಯ ಸರ್ವೇ ನಂಬರ್ 13ರಲ್ಲಿರುವ ಮಾಕಳಿ ಕೆರೆಯನ್ನೇ ಕಬಳಿಸಿದ್ದಾರೆ. ಅವರ ಬಗ್ಗೆಯೂ ತನಿಖೆ ಮಾಡಿಸಬೇಕು ಅಲ್ಲವೇ ಎಂದು ತೀಕ್ಷ್ಣವಾಗಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ