ನನಗೆ ಈಶ್ವರಪ್ಪ ಭೇಟಿ ಆಗುವ ಅವಶ್ಯಕತೆ ಇಲ್ಲ: ಜಗದೀಶ್‌ ಶೆಟ್ಟರ್‌

Published : Dec 15, 2023, 03:27 PM IST
ನನಗೆ ಈಶ್ವರಪ್ಪ ಭೇಟಿ ಆಗುವ ಅವಶ್ಯಕತೆ ಇಲ್ಲ: ಜಗದೀಶ್‌ ಶೆಟ್ಟರ್‌

ಸಾರಾಂಶ

ಸಂಸತ್‌ನಲ್ಲಿ ಯುವಕರು ಒಳನುಗ್ಗಿರುವುದು ಖಂಡನೀಯ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಜಗದೀಶ್‌ ಶೆಟ್ಟರ್‌ ಒತ್ತಾಯಿಸಿದರು. 

ಹುಬ್ಬಳ್ಳಿ (ಡಿ.15): ಸಂಸತ್‌ನಲ್ಲಿ ಯುವಕರು ಒಳನುಗ್ಗಿರುವುದು ಖಂಡನೀಯ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಜಗದೀಶ್‌ ಶೆಟ್ಟರ್‌ ಒತ್ತಾಯಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಹಿ ನೆನಪು ಇನ್ನೂ ಇದೆ. ಕೆಲ ಯುವಕರು ಮೊನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ ಹಾನಿ ಮಾಡುತ್ತಿದ್ದರೋ ಗೊತ್ತಿಲ್ಲ. ಇದೊಂದು ಭದ್ರತಾ ವೈಫಲ್ಯವಾಗಿದೆ. 

ಇದಕ್ಕೆ ಮೂಲ ಕಾರಣ ಯಾರು, ಮೂಲ ಬೇರು ತಗೆದು ಹಾಕೋ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಸಂಪೂರ್ಣ ತನಿಖೆ ಮಾಡಬೇಕು. ಇದು ಸರ್ಕಾರಕ್ಕೆ ಕೆಟ್ಟ ಹೆಸರು ಎಂದರು. ಸಂಸತ್ ದೇಶದ ಹೃದಯ ಭಾಗವಾಗಿದೆ. ಯಾರು ಇಂತಹ ಕೆಲಸ ಮಾಡಿದ್ದಾರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಇಂತಹ ಘಟನೆ ಪದೇ ಪದೇ ಆಗುತ್ತಿವೆ. ಸರಿಯಾಗಿ ತಿಳಿದುಕೊಂಡು ಪಾಸ್ ಕೊಡಬೇಕು. ಈ ಕುರಿತು ಸಮಗ್ರ ತನಿಖೆಯಾಗಬೇಕು. ಯಾಕೆ ಅವರು ಈ ಕೃತ್ಯಕೆ ಕೈ ಹಾಕಿದರೂ ಬಗ್ಗೆ ತನಿಖೆಯಾಗಬೇಕು ಎಂದರು.

ಬಿಜೆಪಿಗೆ ಹೋಗಲ್ಲ: ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಲ್ಲ. ನನಗೆ ಈಶ್ವರಪ್ಪ ಭೇಟಿ ಆಗುವ ಅವಶ್ಯಕತೆ ಇಲ್ಲ. ಇದುವರೆಗೂ ನನ್ನ ಅವರ ಭೇಟಿ ಆಗಿಲ್ಲ, ಮುಂದೆ ಭೇಟಿ ಆಗುವ ಅವಶ್ಯಕತೆಯೂ ಇಲ್ಲ. ಹೀಗೆ ಮಾತಾಡಿ ಪಕ್ಷ ಬಿಟ್ಟು ಹೋಗುವವರಲ್ಲಿ ಈಶ್ವರಪ್ಪ ಗೊಂದಲ ಮೂಡಿಸುತ್ತಿದ್ದಾರೆ. ಒಂದು ಸಣ್ಣ ಎಂಎಲ್‌ಎ ಟಿಕೆಟ್ ಅಂತಾರೆ. ಹೌದು ಒಂದು ಸಣ್ಣ ಟಿಕೆಟ್ ಕೊಡಸೋಕೆ ನಿಮಗೆ ಆಗಲಿಲ್ಲ. ನಿಮಗೂ ಟಿಕೆಟ್ ಸಿಗಲಿಲ್ಲ ಎಂದು ತಿರುಗೇಟು ನೀಡಿದರು.ನಾನು ಅಪಮಾನದಿಂದ ಹೊರಗೆ ಬಂದಿದ್ದೇನೆ. ಈಶ್ವರಪ್ಪನವರೆ ನಿಮಗೆ ಧಕ್ಕೆ ಆದರೆ ಗೊತ್ತಾಗುತ್ತದೆ. ಅಡ್ವಾಣಿ, ವಾಜಪೇಯಿ ಅವರ ಕಾಲದ ಬಿಜೆಪಿ ಇದೀಗ ಉಳಿದಿಲ್ಲ. 

ಇಂದಲ್ಲ, ನಾಳೆ ಪಾಕಿಸ್ತಾನ ಭಾರತಕ್ಕೆ ಸೇರುತ್ತೆ: ಈಶ್ವರಪ್ಪ ಭವಿಷ್ಯ

ಸಿದ್ಧಾಂತ ಮಾತಾಡುವುದನ್ನು ಈಶ್ವರಪ್ಪ ಬಿಟ್ಟು ಬಿಡಲಿ ಎಂದು ಹೇಳಿದರು. ಕರ್ನಾಟಕ ಬಿಜೆಪಿ ಉದ್ದಾರ ಆಗುವುದಕ್ಕೆ ಸಾಧ್ಯ ಇಲ್ಲ. ದಿನಕ್ಕೆ ಒಬ್ಬೊಬ್ಬರು ಮಾತನಾಡುತ್ತಿದ್ದಾರೆ. ಬಿಜೆಪಿ ರಿಪೇರಿ ಆಗಲ್ಲ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಇದೀಗ ಮಾತಾಡಬೇಕು. ಸೋಲಿಸೋಕೆ ಹಣ ಕೊಟ್ಟಿದ್ದಾರೆ, ಬ್ಲಾಕ್ ಮೇಲೆ ಮಾಡಿದ್ದರು ಅಂತಾರೆ. ಇದರ ಬಗ್ಗೆ ಯಾಕೆ ಯಡಿಯೂರಪ್ಪ, ಬೊಮ್ಮಾಯಿ ಮಾತಾಡ್ತಿಲ್ಲ ಎಂದು ಪ್ರಶ್ನಿಸಿದ ಅವರು, ಯಾರದೋ ವೈಯಕ್ತಿಕ ಹಿತಾಸಕ್ತಿಗೆ ನನಗೆ ಟಿಕೆಟ್ ತಪ್ಪಿಸಿದ್ದರು. ನಾನು ವಾಪಸ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka News Live: ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ - ನವದಂಪತಿಗಳಿಗೆ ಸಿಎಂ ಸಲಹೆ
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!