ಮೊನ್ನೇ ಅಷ್ಟೇ ಬಿಜೆಪಿ ಸೇರಿದ್ದ ಮಾಜಿ IPS ಅಣ್ಣಾಮಲೈ ವಿರುದ್ಧ ಕೇಸ್ ಬುಕ್

Published : Aug 28, 2020, 07:04 PM ISTUpdated : Aug 28, 2020, 09:00 PM IST
ಮೊನ್ನೇ ಅಷ್ಟೇ ಬಿಜೆಪಿ ಸೇರಿದ್ದ ಮಾಜಿ IPS ಅಣ್ಣಾಮಲೈ ವಿರುದ್ಧ ಕೇಸ್ ಬುಕ್

ಸಾರಾಂಶ

ಮೂರು ದಿನಗಳ ಹಿಂದಷ್ಟೇ ಬಿಜೆಪಿಗೆ ಸೇರಿದ್ದ ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಹಾಗೂ ಕೆಲ ಪಕ್ಷದ ಕಾರ್ಯಕರ್ತರ ವಿರುದ್ಧ ಕೇಸ್ ಬುಕ್ ಆಗಿದೆ.

ಚೆನ್ನೈ, (ಆ.28):  ಮೊನ್ನೇ ಅಷ್ಟೇ ಬಿಜೆಪಿ ಸೇರಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ. 

ಕೊರೋನಾ ವೈರಸ್ ಭೀತಿ ನಡುವೆಯೂ ಮಾರ್ಗಸೂಚಿ ಉಲ್ಲಂಘಿಸಿ ಸಭೆ ನಡೆಸಿದ ಕಾರಣದಿಂದ ಕೊಯಂಬತ್ತೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

IPS ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವ ಹಿಂದೆ ಕರ್ನಾಟಕದ ಲೀಡರ್: ಯಾರದು..?

ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.

 ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರಿದ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.

ಈ ಹಿನ್ನೆಲೆಯಲ್ಲಿ ಸಬ್‌ ಇನ್ಸ್‌ಪೆಕ್ಟರ್ ಸುಗನ್ಯಾ ನೀಡಿದ ದೂರಿನ ಆಧಾರದ ಮೇಲೆ, ಕತ್ತೂರು ಪೊಲೀಸರು ಕೆ.ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್.ಸೇಕರ್ ಮತ್ತು ಕನಗಸಬಪತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ