ನಿನ್ನ ಅಧಿಕಾರ, ಗೌಡಕಿ ದರ್ಪ ನನ್ಮುಂದೆ ಬೇಡ: ಸಚಿವ ಎಂಬಿಪಾಗೆ ನಿರಾಣಿ ತಿರುಗೇಟು

Published : Sep 02, 2024, 12:39 PM IST
ನಿನ್ನ ಅಧಿಕಾರ, ಗೌಡಕಿ ದರ್ಪ ನನ್ಮುಂದೆ ಬೇಡ: ಸಚಿವ ಎಂಬಿಪಾಗೆ ನಿರಾಣಿ ತಿರುಗೇಟು

ಸಾರಾಂಶ

ಹಿಂದುಳಿದವರ ಬಗ್ಗೆ, ಪಂಚಮಸಾಲಿಗಳ ಬಗ್ಗೆ ನಿನ್ನ ಗೌಡಕಿ ದರ್ಪ, ಅಧಿಕಾರದ ದರ್ಪವನ್ನು ನಮ್ಮ ಮುಂದೆ ಇನ್ನು ಮುಂದೆ ತೋರಿಸಬೇಡ. ನಾನು ಒಂಬತ್ತು ವರ್ಷ ಮಂತ್ರಿ ಆಗಿದ್ದೀನಿ. ನಿನಗಿಂತ 15 ವರ್ಷ ಮೊದಲೇ ಮಂತ್ರಿ ಆಗಿದ್ದೀನಿ.

ಬಾಗಲಕೋಟೆ (ಸೆ.02): ‘ಹಿಂದುಳಿದವರ ಬಗ್ಗೆ, ಪಂಚಮಸಾಲಿಗಳ ಬಗ್ಗೆ ನಿನ್ನ ಗೌಡಕಿ ದರ್ಪ, ಅಧಿಕಾರದ ದರ್ಪವನ್ನು ನಮ್ಮ ಮುಂದೆ ಇನ್ನು ಮುಂದೆ ತೋರಿಸಬೇಡ. ನಾನು ಒಂಬತ್ತು ವರ್ಷ ಮಂತ್ರಿ ಆಗಿದ್ದೀನಿ. ನಿನಗಿಂತ 15 ವರ್ಷ ಮೊದಲೇ ಮಂತ್ರಿ ಆಗಿದ್ದೀನಿ. ನನ್ನ ಜೀವ ಜಾಲಾಡಿಸ್ತೀನಿ ಅಂತಿಯಲ್ಲ, ನಿನ್ನ ಜೀವ ಜಾಲಾಡಿಸೋಕೆ ಸಾಕಷ್ಟಿವೆ’ ಎಂದು ಸಚಿವ ಎಂ.ಬಿ.ಪಾಟೀಲ್‌ ವಿರುದ್ಧ ಮಾಜಿ ಸಚಿವ ಮುರುಗೇಶ ನಿರಾಣಿ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುರುಗೇಶ ನಿರಾಣಿಯಿಂದ ಕೈಗಾರಿಕಾ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಸಚಿವ ಎಂ.ಬಿ.ಪಾಟೀಲ್ ಆರೋಪಕ್ಕೆ ಉತ್ತರಿಸುವ ಸಂದರ್ಭದಲ್ಲಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ ನಿರಾಣಿ, ‘ನೀರಾವರಿ ಸಚಿವನಾದಾಗ ಮತ್ತು ಈಗ ಕೈಗಾರಿಕಾ ಸಚಿವನಾದಾಗ ಒಂದೂ ಭ್ರಷ್ಟಾಚಾರ ಮಾಡಿಲ್ಲ ಅಂತ ನಿನ್ನ ತಾಯಿ-ತಂದೆ ಮೇಲೆ ಪ್ರಮಾಣ ಮಾಡಿ ಹೇಳು. ಸರ್ಕಾರದ ಆಸ್ತಿಯನ್ನು ಬೇರೆಯವರ ಹೆಸರಿನಿಂದ ನಾನು ತೆಗೆದುಕೊಂಡಿಲ್ಲ ಅಂತ ಪ್ರಮಾಣ ಮಾಡು. ನೀನು ಹೇಳಿದನ್ನು ನಾನು ಕೇಳೋಕೆ ತಯಾರಿದ್ದೇನೆ. ಇದು ನನ್ನ ಸವಾಲು. ಕಾಲ ಬರಲಿ ಎಲ್ಲವನ್ನೂ ಒಂದೊಂದಾಗಿ ಮುಂದೆ ಇಡುತ್ತೇನೆ’ ಎಂದರು.

ಕಾರಜೋಳ ಗ್ರಾಮದಲ್ಲಿ 350 ಎಕರೆ ಜಮೀನನ್ನು ಸಕ್ಕರೆ ಕಾರ್ಖಾನೆಗೆ ತೆಗೆದುಕೊಂಡಿರಿ. ಎಸ್ಸಿ ಮತ್ತು ಎಸ್ಟಿ ಜನರಿರುವ ಊರಿನಲ್ಲಿ ಹೆಚ್ಚಿನ ಜಮೀನು ತೆಗೆದುಕೊಂಡಿದ್ದಿರಿ. ಸಕ್ಕರೆ ಕಾರ್ಖಾನೆ ಕಟ್ಟಿ ಬೇರೆ ರಾಜ್ಯದವರಿಗೆ ಮಾರಾಟ ಮಾಡಿದಿರಿ. ರೈತರಿಗೆ ಸುಳ್ಳು ಹೇಳಿ ಮೋಸ ಮಾಡಿದಿರಿ. ನಿರಾಣಿ ಯೋಗ್ಯತೆ ಏನಿದೆ ಎಂತ ಬಾಗಲಕೋಟೆ, ವಿಜಯಪುರ ಜನರಿಗೆ ಗೊತ್ತಿದೆ ಎಂದರು.

2ನೇ ಮದುವೆ ಅತಿಥಿಗಳ ಮೇಲಿನ ಕೇಸ್‌ ರದ್ದು: ಹೈಕೋರ್ಟ್‌ ಆದೇಶ

ನಾವೆಲ್ಲ ದನಾ ಕಾಯೋರು ಅಂತೀರಿ. ಹೌದು, ನಾನು ದನಾ ಕಾಯೋನೆ. ನಾನು ನಿಮ್ಮ ತರಾ ಅಲ್ಲ. ಯಾರೋ ಕಟ್ಟಿರುವ ಬಿಎಲ್‌ಡಿ ಸಂಸ್ಥೆಗೆ ಹುತ್ತಿನಲ್ಲಿ ಹಾವಾಗಿ ಬಂದು ಕೂತು ಅಧ್ಯಕ್ಷನಾಗಿ ಮಜಾ ಮಾಡ್ತಿದ್ದೀಯಾ ಗೌಡ. ನಿಮ್ಮ ಬಿಎಲ್‌ಡಿಎ ಸಂಸ್ಥೆ ಬೇರೆಯವರು ಕಟ್ಟಿದ್ದು, ನೀವು ಬಂದು ಕೂತಿರಿ. ಅಲ್ಲಿ ರಾಜೀನಾಮೆ ಕೊಟ್ಟು ಹೊರ ಬಂದು ಸಂಸ್ಥೆ ಕಟ್ಟಿ ಎಂದು ಸವಾಲು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ