ಅಮಿತ್‌ ಶಾ ಕಾರ್ಯವೈಖರಿಗೆ ಮಾಜಿ ಪ್ರಧಾನಿ ದೇವೇಗೌಡ ಮೆಚ್ಚುಗೆ

Published : Dec 31, 2022, 03:40 AM IST
ಅಮಿತ್‌ ಶಾ ಕಾರ್ಯವೈಖರಿಗೆ ಮಾಜಿ ಪ್ರಧಾನಿ ದೇವೇಗೌಡ ಮೆಚ್ಚುಗೆ

ಸಾರಾಂಶ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅವರು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಅಕ್ರಮಗಳ ತಡೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. 

ಮದ್ದೂರು (ಡಿ.31): ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ಅವರು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಅಕ್ರಮಗಳ ತಡೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶಾ ಅವರ ವ್ಯಕ್ತಿತ್ವ ಬಹಳ ದೊಡ್ಡದು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ತಾಲೂಕಿನ ಗೆಜ್ಜಲಗೆರೆಯಲ್ಲಿ ಶುಕ್ರವಾರ ನಡೆದ ಮೆಗಾ ಡೇರಿ ಘಟಕ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವರ ಕಾರ್ಯವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರು. ಹಲವು ಇಲಾಖೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ, ನಷ್ಟಕ್ಕೆ ಕಾರಣವಾದ ಸಂಗತಿಗಳನ್ನು ತಿಳಿದುಕೊಳ್ಳಲು ಅವರು ಉತ್ಸುಕರಾಗಿದ್ದಾರೆ ಎಂದರು.

ನಾನು ಪ್ರಧಾನಿಯಾಗಿದ್ದಾಗ ರಾಜ್ಯದಲ್ಲಿ ಹಾಲು ಉತ್ಪಾದಕರ 12 ಸೊಸೈಟಿಗಳಿದ್ದವು. ರೇವಣ್ಣ 12 ಸೊಸೈಟಿಗಳನ್ನು ಒಂದುಗೂಡಿಸಿದರು. ಇದೇ ವೇಳೆ ಕುರಿಯನ್‌ ಅವರು ಗುಜರಾತ್‌ನಲ್ಲಿ ಸಾಕಷ್ಟುಬದಲಾವಣೆ ತಂದಿದ್ದರು. ನಮ್ಮಲ್ಲೂ ಅಭಿವೃದ್ಧಿಗೆ ಏನಾದರೂ ಮಾಡಿ ಎಂದು ಕೇಳಿಕೊಂಡೆ. ಅವರ ಸಹಕಾರ ದೊರೆತ ಪರಿಣಾಮ ಇಂದು ಜಿಲ್ಲಾ ಹಾಲು ಒಕ್ಕೂಟ ಸ್ಥಾಪನೆಯಾಗಿ ದೊಡ್ಡದಾಗಿ ಬೆಳೆದು ನಿಂತಿದೆ ಎಂದರು. ಅಮಿತ್‌ ಶಾ ಅವರಿಗೆ ಅರ್ಥವಾಗಲಿ ಎಂದು ಅವರು ಇಂಗ್ಲಿಷ್‌ನಲ್ಲಿಯೇ ಮಾತನಾಡಿದರು.

ಟಿಕೆಟ್‌ ನಿರ್ಧಾರ ಜನರದ್ದು, ಬಿ ಫಾರ್ಮ್‌ ನಿರ್ಧಾರ ನನ್ನದು: ಎಚ್‌.ಡಿ.ದೇವೇಗೌಡ

ಉಪ್ಸಾರು, ಮುದ್ದೆ ಸವಿದ ಮಾಜಿ ಪ್ರಧಾನಿ: ಮನ್ಮುಲ್‌ನಲ್ಲಿ ಮೆಗಾಡೇರಿ ಉದ್ಘಾಟನೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಉಪ್ಸಾರು, ಮುದ್ದೆ ಊಟ ಸವಿದರು. ಮದ್ದೂರು ಪಟ್ಟಣಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಶಾಸಕ ಡಿ.ಸಿ.ತಮ್ಮಣ್ಣ, ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಅಭಿನಂದಿಸಿ ಸ್ವಾಗತಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರಕ್ಕೆ ತೆರಳಿ ಮುಖಂಡರೊಂದಿಗೆ ಉಪ್ಸಾರು, ಮುದ್ದೆ ಸೇವಿಸಿದರು. ಈ ವೇಳೆ ಶಾಸಕ ಡಿ.ಸಿ.ತಮ್ಮಣ್ಣ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮನ್ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ನಿರ್ದೇಶಕರಾದ ನಲ್ಲಿಗೆರೆ ಬಾಲು, ಎಚ್‌.ಟಿ.ಮಂಜು ಸೇರಿದಂತೆ ಇತರರಿದ್ದರು.

ದೇವೇಗೌಡರ ಬೆನ್ನಿಗೆ ಚೂರಿ ಹಾಕೋಲ್ಲ: ಶಾಸಕ ಸಿ.ಎಸ್‌.ಪುಟ್ಟರಾಜು

ಸಹಕಾರ ಇಲಾಖೆ ಅಕ್ರಮಗಳ ಬಗ್ಗೆ ಗಮನ: ರಾಷ್ಟ್ರದ ಗೃಹ ಮಂತ್ರಿಗಳು ಸಹಕಾರ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಗಮನ ಹರಿಸಿದ್ದಾರೆ. ಹಲವು ಇಲಾಖೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ನಷ್ಟದ ಕಾರಣ ತಿಳಿದುಕೊಳ್ಳಲು ನಮ್ಮ ಜೊತೆ ಕುಳಿತಿದ್ದಾರೆ. ಇದರಲ್ಲಿ ರಾಜಕೀಯ ಬೇಡ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು. ಸಮಾರಂಭದಲ್ಲಿ ಮಾತನಾಡಿ, ನಾನು ಪ್ರಧಾನಿಯಾಗಿದ್ದಾಗ 12 ಸೊಸೈಟಿ ಇತ್ತು. ರೇವಣ್ಣ 12 ಸೊಸೈಟಿಗಳನ್ನು ಒಂದುಗೂಡಿಸಿದರು. ಕುರಿಯನ್‌ ಅವರು ಏನಾದರೂ ಮಾಡಬೇಕು ಎಂದಿದ್ದರು. ಅವರು ಗುಜರಾತ್‌ನಲ್ಲಿ ಸಾಕಷ್ಟುಬದಲಾವಣೆ ತಂದಿದ್ದರು. ನಮ್ಮಲ್ಲೂ ಮಾಡುವಂತೆ ಕೇಳಿಕೊಂಡೆ. ಅದರ ಫಲವಾಗಿ ಜಿಲ್ಲಾ ಹಾಲು ಒಕ್ಕೂಟ ಸ್ಥಾಪನೆಯಾಗಿ ದೊಡ್ಡದಾಗಿ ಬೆಳೆದು ನಿಂತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?