
ಬೆಂಗಳೂರು, (ಜೂನ್.23): ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾರೆಡ್ಡಿ ಎಸಿಬಿಗೆ ದೂರು ಸಲ್ಲಿಸಿದ್ದಾರೆ.
ಅಬಕಾರಿ ಸಚಿವರು ಪ್ರತಿ ಜಿಲ್ಲೆಗಳಿಂದ 5 ಲಕ್ಷ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆಡಿಯೋ ವೈರಲ್ ವೈರಲ್ ಆದ ಬೆನ್ನಲ್ಲೇ ಆಡಿಯೋವನ್ನು ಆಧಾರವನ್ನಾಗಿ ಇಟ್ಟುಕೊಂಡು ರವಿಕೃಷ್ಣಾರೆಡ್ಡಿ ದೂರು ನೀಡಿದ್ದಾರೆ.
ನೀರಾವರಿ ಇಲಾಖೆ ಬಳಿಕ ಅಬಕಾರಿ ಇಲಾಖೆಯ ಅಕ್ರಮ ಬಯಲು: ತನಿಖೆಗೆ ಎಚ್ಡಿಕೆ ಆಗ್ರಹ
ಸಚಿವ ಕೆ. ಗೋಪಾಲಯ್ಯ ಪ್ರತಿ ಜಿಲ್ಲೆಗಳಿಂದ 5 ಲಕ್ಷ ಹಣ ಸಂಗ್ರಹಿಸುತ್ತಿದ್ದಾರೆಂದು ಆರೋಪಿಸಿದ್ದ ಆಡಿಯೋ ವೈರಲ್ ಆಗಿರೋದ್ರಿಂದ, 4 ಜನ ಅಧಿಕಾರಿಗಳನ್ನ ಸಚಿವ ಕೆ. ಗೋಪಾಲಯ್ಯ ಅಮಾನತುಗೊಳಿಸಿದ್ದರು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಮಂತ್ರಿಗಳು ಕೂಡಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ರವಿಕೃಷ್ಣಾರೆಡ್ಡಿ ಆರೋಪಿಸಿದ್ದಾರೆ.
ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ರೂ. ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.