
ನವದೆಹಲಿ(ಜು.19): ಪಕ್ಷದಲ್ಲಿರುವ ಯುವ ನಾಯಕರ ಪಡೆ ಪಕ್ಷ ತೊರೆಯುವುದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗಲ್ಲ. ಇಂಥ ಬೆಳವಣಿಗೆಗಳು ಹೊಸ ನಾಯಕರ ಉದಯಕ್ಕೆ ಪೂರಕವಾಗಲಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಸಚಿನ್ ಪೈಲಟ್ ಬಣ ಶಾಸಕರು ಬೆಂಗಳೂರಿಗೆ ಶಿಫ್ಟ್?
ಈ ಮೂಲಕ ಈಗಾಗಲೇ ಪಕ್ಷದಿಂದ ಒಂದು ಕಾಲು ಆಚೆ ತೆಗೆದಿರಿಸಿದ ರಾಜಸ್ಥಾನ ಪದಚ್ಯುತ ಡಿಸಿಎಂ ಸಚಿನ್ ಪೈಲಟ್ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಕೆಡವಿ ಬಿಜೆಪಿ ಗೂಡು ಸೇರಿಕೊಂಡ ಜ್ಯೋತಿರಾಧಿತ್ಯ ಸಿಂಧಿಯಾ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಇತ್ತೀಚೆಗೆ ಕೆಲವರು ಪಕ್ಷ ತೊರೆಯುತ್ತಿದ್ದಾರೆ. ಇದರಿಂದ ವ್ಯಾಕುಲತೆ ಒಳಗಾಗಬೇಡಿ. ನಿಮ್ಮ ನಾಯಕತ್ವದ ಬೆಳವಣಿಗೆಗೆ ಇದು ಅನುವಾಗಲಿದೆ ಎಂದು ಕಾಂಗ್ರೆಸ್ ವಿದ್ಯಾರ್ಥಿ ಘಟಕಕ್ಕೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.