ಸಂಚಲನ ಮೂಡಿಸಿದ ರಾಜಕೀಯ: ಕಾಂಗ್ರೆಸ್‌ನ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

Published : Dec 29, 2020, 04:52 PM ISTUpdated : Dec 29, 2020, 04:57 PM IST
ಸಂಚಲನ ಮೂಡಿಸಿದ ರಾಜಕೀಯ:  ಕಾಂಗ್ರೆಸ್‌ನ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

ಸಾರಾಂಶ

2021ರ ವಿಧಾನಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ನ ಇಬ್ಬರು ಶಾಸಕರು ಹಾಗೂ ಓರ್ವ ಮಾಜಿ ಶಾಸಕ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಗುವಾಹಟ್ಟಿ, (ಡಿ.29): ಕಾಂಗ್ರೆಸ್ ನ ಇಬ್ಬರು ಉಚ್ಚಾಟಿತ ಶಾಸಕರು ಮತ್ತು ಒಬ್ಬ ಮಾಜಿ ಶಾಸಕರು ಇಂದು (ಮಂಗಳವಾರ) ಬಿಜೆಪಿ ಸೇರಿದರು.

ಕಾಂಗ್ರೆಸ್ ನ ಮಾಜಿ ಶಾಸಕರಾದ ಅಜಂತಾ ನಿಯೋಗ್ ಮತ್ತು ರಾಜ್ ದೀಪ್ ಗೋವಾಲಾ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಮಾಜಿ ಶಾಸಕ ಬನೇಂದ್ರ ಮುಶಾಹರ್ ಅವರು ಗುವಾಹಟಿಯ ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಯಾದರು.

ಬಿಜೆಪಿಗೆ ಗುಡ್‌ ಬೈ ಹೇಳಿದ MP: ಸಂಸದ ಸ್ಥಾನಕ್ಕೂ ರಾಜೀನಾಮೆ ಸಾಧ್ಯತೆ...!

ಪಕ್ಷದ ರಾಜ್ಯ ಅಧ್ಯಕ್ಷ ರಂಜಿತ್ ಕುಮಾರ್ ದಾಸ್, ರಾಜ್ಯ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ, ಅರಣ್ಯ ಸಚಿವ ಪರಿಮಳ್ ಸುಖಾಬೈದ್ಯ ಮತ್ತಿತರ ಹಿರಿಯ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು. 2021ರ ವಿಧಾನಸಭೆ ಚುನಾವಣೆಗೆ ಬಿಜೆಪಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.

ಅಜಂತಾ ನೀಗ್ ಅಸ್ಸಾಂ ಕಾಂಗ್ರೆಸ್ ನ ಪ್ರಬಲ ನಾಯಕರಲ್ಲಿ ಒಬ್ಬರು. ಇದೀಗ ಅವರು ಬಿಜೆಪಿ ಸೇರುವುದರಿಂದ ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುತ್ತದೆ ಎಂದು ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

'ಅವರ ಅಗಾಧವಾದ ಆಡಳಿತ ಮತ್ತು ರಾಜಕೀಯ ಅನುಭವವು ಖಂಡಿತವಾಗಿಯೂ ಅಸ್ಸಾಂನಲ್ಲಿ ಬಿಜೆಪಿಯನ್ನು ಬಲಪಡಿಸುತ್ತದೆ. ರಾಜ್ ದೀಪ್ ಗೋವಾಲಾ ಅವರು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿದ್ದು, ಅವರ ಸೇರ್ಪಡೆ ನಮ್ಮ ಪಕ್ಷವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ