ರಾಹುಲ್ ಗಾಂಧಿ ಕೋಲಾರಕ್ಕೆ ಬರುವ ವಿಚಾರದಲ್ಲೂ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರು..!

Published : Mar 29, 2023, 01:34 PM IST
ರಾಹುಲ್ ಗಾಂಧಿ ಕೋಲಾರಕ್ಕೆ ಬರುವ ವಿಚಾರದಲ್ಲೂ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರು..!

ಸಾರಾಂಶ

ರಾಹುಲ್ ಗಾಂಧಿ ಸಮಾವೇಶದ ಸ್ಥಳ ಇನ್ನು ನಿಗಧಿ ಆಗಿಲ್ಲ. ಕೆ.ಹೆಚ್ ಮುನಿಯಪ್ಪ ತಮ್ಮ ಬೆಂಬಲಿಗರೊಂದಿಗೆ ಸ್ಥಳ ವೀಕ್ಷಣೆ ನಡೆಸಿದ್ರೆ, ಇತ್ತ ರಮೇಶ್ ಕುಮಾರ್ ಅಂಡ್ ಟೀಮ್ ನಸೀರ್ ಅಹ್ಮದ್ ನೇತೃತ್ವದಲ್ಲಿ ಪ್ರತ್ಯೇಕವಾಗಿ ಸ್ಥಳ ವೀಕ್ಷಣೆ ಮಾಡಿದೆ. 

ಕೋಲಾರ(ಮಾ.29): ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಕೋಲಾರಕ್ಕೆ ಬರುವ ವಿಚಾರದಲ್ಲೂ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಶುರುವಾಗಿದೆ. ಹೌದು, ರಮೇಶ್ ಕುಮಾರ್ ಹಾಗೂ ಕೆ.ಎಚ್. ಮುನಿಯಪ್ಪ ಮಧ್ಯೆ ಬಣ ರಾಜಕೀಯ ಆರಂಭವಾಗಿದೆ.  ಪ್ರತ್ಯೇಕವಾಗಿ ಎರಡೂ ಬಣದವರು ಸಮಾವೇಶದ ಸ್ಥಳಕ್ಕೆ ಹುಡುಕಾಟ ನಡೆಸಿದ್ದಾರೆ. ಈ ಮೂಲಕ ಕೋಲಾರ ಜಿಲ್ಲಾ‌ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಮುಂದುವರೆದಿದೆ. ನಿನ್ನೆ(ಮಂಗಳವಾರ) ರಮೇಶ್ ಕುಮಾರ್ ಬಣದವರನ್ನು ಬಿಟ್ಟು ಕೆ.ಎಚ್. ಮುನಿಯಪ್ಪ ಪ್ರೆಸ್ ಮೀಟ್ ಮಾಡಿದ್ದರು. 

ರಾಹುಲ್ ಗಾಂಧಿ ಏ 5 ರಂದು ಕೋಲಾರಕ್ಕೆ ಆಗಮಿಸಲಿದ್ದಾರೆ. 1 ಲಕ್ಷ ಜನರನ್ನು ಸೇರಿಸಿ ಕಾಂಗ್ರೆಸ್‌ನಿಂದ ಬೃಹತ್ ಸಮಾವೇಶ ಮಾಡಲು ತಯಾರಿ ನಡೆಯುತ್ತಿದೆ. ಆದರೆ, ಸಮಾವೇಶದ ಸ್ಥಳ ವೀಕ್ಷಣೆಯಲ್ಲೂ ಬಣ ರಾಜಕೀಯ ಮುಂದುವರೆದಿದೆ. 

ಏ.5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಭೇಟಿ: ಅನರ್ಹತೆ ಬಗ್ಗೆ ಇಲ್ಲಿಂದಲೇ ಉತ್ತರ

ಹೀಗಾಗಿ ರಾಹುಲ್ ಗಾಂಧಿ ಸಮಾವೇಶದ ಸ್ಥಳ ಇನ್ನು ನಿಗಧಿ ಆಗಿಲ್ಲ. ಕೆ.ಹೆಚ್ ಮುನಿಯಪ್ಪ ತಮ್ಮ ಬೆಂಬಲಿಗರೊಂದಿಗೆ ಸ್ಥಳ ವೀಕ್ಷಣೆ ನಡೆಸಿದ್ರೆ, ಇತ್ತ ರಮೇಶ್ ಕುಮಾರ್ ಅಂಡ್ ಟೀಮ್ ನಸೀರ್ ಅಹ್ಮದ್ ನೇತೃತ್ವದಲ್ಲಿ ಪ್ರತ್ಯೇಕವಾಗಿ ಸ್ಥಳ ವೀಕ್ಷಣೆ ಮಾಡಿದೆ. 

ಕೋಲಾರದ ಎರಡು ಬಣ ರಾಜಕೀಯ ನಡುವೆ ರಾಹುಲ್ ಗಾಂಧಿ ಕೋಲಾರಕ್ಕೆ ಆಗಮಿಸುತ್ತಿದ್ದಾರೆ. 2019 ರಲ್ಲಿ ಕೋಲಾರದಲ್ಲಿ ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಭಾಷಣ ಮಾಡಿದ್ದರಿಂದಲೇ ಇಂದು ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ. ಈಗಲೂ ಕೋಲಾರದಿಂದಲೇ ರಾಹುಲ್ ಗಾಂಧಿ ರಣಕಹಳೆ ಮೊಳಗಿಸಲಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ