ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಬ್ರೇಕ್‌ ಬೀಳಲಿದೆ: ಯತ್ನಾಳ

Published : Dec 13, 2022, 06:15 AM IST
ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಬ್ರೇಕ್‌ ಬೀಳಲಿದೆ: ಯತ್ನಾಳ

ಸಾರಾಂಶ

ಈಗ ಸಚಿವ ಸಂಪುಟ ವಿಸ್ತರಣೆ ಮಾಡಿ ಪ್ರಯೋಜನವೇನು? ಈಗ ಸಂಪುಟ ವಿಸ್ತರಣೆ ಯಾರಿಗೂ ಬೇಕಾಗಿಲ್ಲ. ಎಲ್ಲರೂ ಹೊಸ ಸರ್ಕಾರದಲ್ಲಿ ಮಂತ್ರಿಯಾಗಬೇಕು ಎಂದು ಸುಮ್ಮನಿದ್ದಾರೆ. ಚುನಾವಣೆಗೆ ಮೂರ್ನಾಲ್ಕು ತಿಂಗಳಿರುವಾಗ ಸಂಪುಟ ವಿಸ್ತರಣೆ ಮಾಡಿ ಪ್ರಯೋಜನವಿಲ್ಲ ಎಂದ ಯತ್ನಾಳ

ಬೆಳಗಾವಿ(ಡಿ.13): ಚುನಾವಣೆಗೆ ನಾಲ್ಕು ತಿಂಗಳಿರುವಾಗ ರಾಜ್ಯ ಸಂಪುಟ ವಿಸ್ತರಣೆ ಯಾರಿಗೂ ಬೇಕಾಗಿಲ್ಲ, ಎಲ್ಲಾ ಖಾತೆಯನ್ನೂ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಇಟ್ಟುಕೊಳ್ಳಲಿ. ಈಗ ಸಚಿವರಾಗಿ ಏನು ಅಭಿವೃದ್ಧಿ ಮಾಡುತ್ತಾರೆ. ಈಗ ಮಂತ್ರಿಯಾಗಲು ಯಾರಿಗೂ ಆಸಕ್ತಿ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಸಚಿವ ಸಂಪುಟ ವಿಸ್ತರಣೆ ಮಾಡಿ ಪ್ರಯೋಜನವೇನು? ಈಗ ಸಂಪುಟ ವಿಸ್ತರಣೆ ಯಾರಿಗೂ ಬೇಕಾಗಿಲ್ಲ. ಎಲ್ಲರೂ ಹೊಸ ಸರ್ಕಾರದಲ್ಲಿ ಮಂತ್ರಿಯಾಗಬೇಕು ಎಂದು ಸುಮ್ಮನಿದ್ದಾರೆ. ಚುನಾವಣೆಗೆ ಮೂರ್ನಾಲ್ಕು ತಿಂಗಳಿರುವಾಗ ಸಂಪುಟ ವಿಸ್ತರಣೆ ಮಾಡಿ ಪ್ರಯೋಜನವಿಲ್ಲ ಎಂದರು.

ಬೆಳಗಾವಿ: ಬಿಜೆಪಿ ಬ್ಲಾಕ್‌ ಅಧ್ಯಕ್ಷ ಗಾದಿಗೆ ಗುದ್ದಾಟ..!

ಇದೇ ವೇಳೆ ಈ ಬಾರಿ ರಾಜ್ಯ ಬಿಜೆಪಿಯಲ್ಲಿ ಹಲವು ಬದಲಾವಣೆಗಳು ಆಗಲಿವೆ. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಬ್ರೇಕ್‌ ಬೀಳಲಿದೆ. ಗುಜರಾತ್‌ ರೀತಿ ಇಲ್ಲಿಯೂ ಹೊಸಬರಿಗೆ ಟಿಕೆಟ್‌ ನೀಡಬೇಕು. ರಾಜ್ಯದಲ್ಲಿಯೂ ಕೆಲ ಬದಲಾವಣೆಯಾಗಲಿದೆ. ಯಾರ ವಿರುದ್ಧ ಆರೋಪವಿದೆಯೋ ಅಂತವರಿಗೆ ಚುನಾವಣೆ ಟಿಕೆಟ್‌ ಕೊಡಬಾರದು. ಒಂದೇ ಕುಟುಂಬದ ಎರಡು ಮೂರು ಜನರಿಗೆ ಟಿಕೆಟ್‌ ಸಿಗುವಂತಿಲ್ಲ. ಒಂದು ಕುಟುಂಬಕ್ಕೆ ಒಂದೇ ಟಿಕೆಟ್‌ ನೀಡುವ ಮೂಲಕ ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್‌ ಹಾಕಬೇಕಿದೆ. ಈ ನಿಟ್ಟಿನ ಚರ್ಚೆಯೂ ನಡೆದಿದೆ ಎಂದರು. ಇದೇ ವೇಳೆ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಡಿ. 22ರಂದು ನಮ್ಮ ಸಮುದಾಯದ ಅಂತಿಮ ಹೋರಾಟ ಅಥವಾ ವಿಜಯೋತ್ಸವ ನಡೆಯಲಿದೆ. ಡಿ.19ರ ಗಡುವು ನಾವು ಕೊಟ್ಟಿದ್ದಲ್ಲ. ಸಿಎಂ ಬೊಮ್ಮಾಯಿ ಅವರು ಕೊಟ್ಟಿದ್ದು. ವಿಧಾನಸಭಾ ಚುನಾವಣೆ ಫೆಬ್ರವರಿಯಲ್ಲಿ ಆಗಲಿ, ಮೇ ನಲ್ಲಾಗಲಿ ನೀತಿ ಸಂಹಿತೆ ಜಾರಿಗೂ ಮುನ್ನವೆ ಮೀಸಲಾತಿ ಘೋಷಣೆಯಾಗಲಿ ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ