
ಬೆಂಗಳೂರು, (ಜು.10): ಅವಧಿ ಪೂರ್ಣಗೊಳಿಸಿ ಜೂನ್ ತಿಂಗಳಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ನಿವೃತ್ತಿ ಹೊಂದಿದ 16 ಮಂದಿ ವಿಧಾನ ಪರಿಷತ್ತಿನ ನಿವೃತ್ತ ಸದಸ್ಯರನ್ನು ಬೀಳ್ಕೊಡಲಾಯಿತು.
ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,ನಿವೃತ್ತರಾಗಿರುವ 16 ಎಂಎಲ್ಸಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಚುನಾವಣೆ ಇಲ್ಲದೇ ವಿಧಾನಪರಿಷತ್ ಪ್ರವೇಶಿಸಿದ 7 ಅಭ್ಯರ್ಥಿಗಳು
ಸಮ್ಮೇಳನಾ ಸಭಾಂಗಣ ವಿಧಾನ ಪರಿಷತ್ ಸಚಿವಾಲಯ ಇಂದು (ಶುಕ್ರವಾರ) ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಸಮಾರಂಭದಲ್ಲಿ ಅವಧಿ ಮುಗಿದ 16 ಮಂದಿ ಸದಸ್ಯರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ವಿಧಾನ ಪರಿಷತ್ತಿನ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಮೇಲ್ಮನೆ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಪರಿಷತ್ ವಿರೋಧ ಪಕ್ಷ ನಾಯಕ ಎಸ್.ಆರ್.ಪಾಟೀಲ್, ವಿಪಕ್ಷ ಸಚೇತಕ ನಾರಾಯಣಸ್ವಾಮಿ ಗಣ್ಯರು ನಿವೃತ್ತ ವಿಧಾನ ಪರಿಷತ್ ಸದಸ್ಯರನ್ನು ಸನ್ಮಾನಿಸಿ ಬೀಳ್ಕೊಟ್ಟರು. ಆದ್ರೆ, ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೈರಾಗಿದ್ದರು.
ನಿವೃತ್ತಿಯಾದವರು
* ವಿಧಾನಸಭೆ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಜಯಮ್ಮ ಬೋಸರಾಜ್, ಹೆಚ್.ಎಂ.ರೇವಣ್ಣ ನಸೀರ್ ಅಹ್ಮದ್, ಎಂ.ಸಿ.ವೇಣುಗೋಪಾಸ್, ಟಿ.ಎ.ಶವರಣ, ಡಿಯು ಮಲ್ಲಿಕಾರ್ಜುನ.
* ನಾಮ ನಿರ್ದೇಶನಗೊಂಡಿರುವ ಜಯಮಾಲಾ ರಾಮಚಂದ್ರ, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ, ಇಕ್ಬಾಲ್ ಅಹಮ್ಮದ್ ಸರಡಗಿ, ತಿಪ್ಪಣ್ಣ ಕಮಕನೂರ್, ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಚೌಡರೆಡ್ಡಿ ತೂಪ್ಪಿ, ಎಸ್.ವಿ.ಸಂಕನೂರು ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಪುಟ್ಟಣ್ಣ, ಶರಣಪ್ಪ ಮಟ್ಟೂರು ನಿವೃತ್ತರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.