
ವಿಜಯನಗರ (ಜು.15): ಮಾಜಿ ಸಚಿವ ಆನಂದ ಸಿಂಗ್ ರಾಜಕೀಯ ನಿವೃತ್ತಿಯತ್ತ ಹೆಜ್ಜೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಮೂರು ಬಾರಿ ಬಿಜೆಪಿ ಒಮ್ಮೆ ಕಾಂಗ್ರೆಸ್ ನಿಂದ ಗೆದ್ದಿರೋ ಆನಂದ ಸಿಂಗ್ ಗೆ ಮಗ ಸಿದ್ದಾರ್ಥ ಸಿಂಗ್ ಸೋಲು ರಾಜಕೀಯ ನಿರಾಸಕ್ತಿ ಮೂಡಿಸಿದೆಯಾ ಎಂದು ಪ್ರಶ್ನೆ ಮೂಡಿಸಿದೆ. ಸಾವಿರಾರು ಮತಗಳ ಅಂತರದಿಂದ ಗೆದ್ದಿರೋ ಆನಂದ ಸಿಂಗ್ ಅವರಿಗೆ ಮಗನ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಕೂಡ ಹೇಳಲಾಗುತ್ತಿದೆ. ಮೊದಲು ಚುನಾವಣೆಯಿಂದ ಹಿಂದೆ ಸರಿದ್ರು. ಇದೀಗ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆನಂದ ಸಿಂಗ್ ರಾಜೀನಾಮೆಯಿಂದ ವಿಜಯನಗರ ಬಳ್ಳಾರಿ ಬಿಜೆಪಿಗೆ ಭಾರಿ ಹೊಡೆತ ಬಿದ್ದಿದೆ. ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಅಯ್ಕೆಯಾಗಿದ್ದರು. ಇನ್ನೂ ಎರಡು ಮೂರು ವರ್ಷಗಳ ಅವಧಿ ಇರುವಾಗಲೇ ಆನಂದ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಮೀಪ ಇರುವಾಗಲೇ ಆನಂದ ಸಿಂಗ್ ರಾಜೀನಾಮೆ ದೊಡ್ಡ ಸಂಚಲನ ಮೂಡಿಸಿದೆ.
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್ಕ್ಲೂಸಿವ್ ಮಾಹಿತಿ,
ಹೊಸಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದಾರ್ಥ ಸಿಂಗ್ ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ 33 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ನ ಶಾಸಕ ಎಚ್.ಆರ್. ಗವಿಯಪ್ಪ ಅವರ ವಿರುದ್ಧ ಸೋಲು ಕಂಡಿದ್ದರು. ಇದು ಆನಂದ್ ಸಿಂಗ್ ನೋವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. 2008ರಲ್ಲಿ ಕ್ಷೇತ್ರ ವಿಂಗಡಣೆ ಆದ ಬಳಿಕ ಈ ಕ್ಷೇತ್ರದಲ್ಲಿ ಆನಂದ ಸಿಂಗ್ ಅವರು ಸೋಲಿಲ್ಲದ ಸರದಾರನಾಗಿ ಮುನ್ನಡೆದಿದ್ದರು ಎಂಬುದು ಗಮನಾರ್ಹ ಸಂಗತಿ.
ನಾನು ಕೂಡ ಲೋಕಸಭೆಗೆ ಟಿಕೆಟ್ ಆಕಾಂಕ್ಷಿ, ರೇಣುಕಾಚಾರ್ಯ ಸಿದ್ಧತೆಗೆ ಮುಳ್ಳಾಗ್ತಾರಾ ಸಿದ್ದೇಶ್ವರ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.