
ಸಾಗರ್ (ಮಧ್ಯಪ್ರದೇಶ)(ಆ.23): ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಉಚಿತ ಗ್ಯಾರಂಟಿ ಯೋಜನೆ ಘೋಷಣೆ ಮುಂದುವರೆಸಿರುವ ಕಾಂಗ್ರೆಸ್, ಇದೀಗ ಮಧ್ಯಪ್ರದೇಶದಲ್ಲೂ ಭರ್ಜರಿ ಕೊಡುಗೆ ಘೋಷಿಸಿದೆ. ವರ್ಷಾಂತ್ಯಕ್ಕೆ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಬುಂದೇಲ್ಖಂಡ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರೈತರು, ಮಹಿಳೆಯರು, ಹಿಂದುಳಿದ ಸಮುದಾಯಗಳನ್ನು ಸೆಳೆಯುವ ಹಲವು ಉಚಿತ ಯೋಜನೆಗಳನ್ನು ಘೋಷಿಸಿದ್ದಾರೆ.
ಗ್ಯಾರಂಟಿ ಘೋಷಣೆಗಳು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟಬೆನ್ನಲ್ಲೇ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ಗಢ ಸೇರಿದಂತೆ ಪಂಚರಾಜ್ಯಗಳ ಚುನಾವಣೆಯಲ್ಲೂ ಇದೇ ತಂತ್ರ ಬಳಸಲು ಕಾಂಗ್ರೆಸ್ ಮುಂದಾಗಿದೆ.
ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?
ಬುಂದೇಲ್ಖಂಡದ ಸಾಗರ್ನಲ್ಲಿ ಸಾರ್ವಜನಿಕ ರಾರಯಲಿ ಉದ್ದೇಶಿಸಿ ಮಾತನಾಡಿದ ಖರ್ಗೆ, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದರೆ ಜಾತಿ ಗಣತಿ ನಡೆಸಲಾಗುವುದು, ರೈತರ ಸಾಲಮನ್ನಾ ಮಾಡಲಾಗುವುದು ಎಂದು ಹೇಳಿದರು. ಅಲ್ಲದೇ ಮಹಿಳಾ ಸಬಲೀಕರಣಕ್ಕಾಗಿ ಪ್ರತಿ ಮಹಿಳೆಗೂ ತಿಂಗಳಿಗೆ 1500 ರು. ಸಹಾಯಧನ ನೀಡಲಾಗುವುದು. ಪ್ರತಿ ಕುಟುಂಬಕ್ಕೆ ಅನಿವಾರ್ಯವಾಗಿರುವ ಗ್ಯಾಸ್ ಸಿಲಿಂಡರ್ಗಳನ್ನು 500 ರು.ಗೆ ನೀಡಲಾಗುವುದು. 100 ಯುನಿಟ್ವರೆಗೆ ಉಚಿತ ವಿದ್ಯುತ್ ಸಹ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಅಲ್ಲದೇ ಸರ್ಕಾರಿ ನೌಕರರ ಕ್ಷೇಮಕ್ಕಾಗಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡಲಾಗುವುದು. ಸಂತ ರವಿದಾಸರ ಹೆಸರಲ್ಲಿ ಸಾಗರದಲ್ಲಿ ವಿಶ್ವವಿದ್ಯಾಲಯ ನಿರ್ಮಾಣ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.