ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಪ್ರಧಾನಿ ಮೋದಿ ಕಿಡಿ

Published : Nov 05, 2024, 04:22 AM IST
ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ:  ಪ್ರಧಾನಿ ಮೋದಿ ಕಿಡಿ

ಸಾರಾಂಶ

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ ಎಂದ ಪ್ರಧಾನಿ ನರೇಂದ್ರ ಮೋದಿ 

ರಾಂಚಿ(ನ.05): 'ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂ ಟಿಗಳನ್ನು ಘೋಷಿಸಬೇಕು. ಕಾರ್ಯ ಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು' ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ. 

ಕಾಂಗ್ರೆಸ್‌ನ ಗ್ಯಾರಂಟಿಗಳಿಂದಾಗಿ ಕರ್ನಾಟಕದಂತಹ ರಾಜ್ಯಗಳು ಆರ್ಥಿಕವಾಗಿ ವಿನಾಶವಾಗಿವೆ ಎಂದಿದ್ದಾರೆ. ಜಾರ್ಖಂಡ್ ವಿಧಾನಸಭಾ ಚುನಾವಣೆ ಅಂಗವಾಗಿ ಸೋಮವಾರ ಗಢವಾ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದರು.

ಅಕ್ರಮ ಹಣ ವರ್ಗಾವಣೆ ಕೇಸ್‌: 5 ತಿಂಗಳ ಬಳಿಕ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

'ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಿಂದಲೂ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಲೇ ಬಂದಿದೆ. ಜೊತೆಗೆ, ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳನ್ನು ನೀಡುತ್ತದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿದ್ದಾರೆ' ಎಂದರು. 

“ಕಾಂಗ್ರೆಸ್‌ನ ಕಾರ್ಯಸಾಧುವಲ್ಲದ ಚುನಾವಣಾ ಗ್ಯಾರಂಟಿಗಳು ಹೇಗೆ ರಾಜ್ಯಗ ಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಖರ್ಗೆ ಹೇಗೆ ಬಹಿರಂಗವಾಗಿ ಹೇಳಿದರು ಎಂದುನನಗೆ ಅಚ್ಚರಿಯಾಗುತ್ತಿದೆ. ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾ ಗಿಯೇ ಇಂದು ಹಿಮಾಚಲ, ತೆಲಂಗಾಣ ಮತ್ತು ಕರ್ನಾಟಕದಂಥ ರಾಜ್ಯಗಳು ಆರ್ಥಿಕವಾಗಿ ವಿನಾಶವಾಗಿವೆ' ಎಂದು ಮೋದಿ ಆರೋಪಿಸಿದರು. 

ಇನ್ನು ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ಟೀಕಿಸಿದ ಬಳಿಕ ಮೋದಿ ಅವರು, 'ಸೌಲಭ್ಯ, ಸುರಕ್ಷೆ, ಸ್ಥಿರತೆ, ಸಮೃದ್ಧಿ ಇವು ಮೋದಿ ನೀಡುವ ಗ್ಯಾರಂಟಿಗಳು' ಎಂದರು ಹಾಗೂ ಜಾರ್ಖಂಡ್‌ನಲ್ಲಿ ಬಿಜೆಪಿ ಗೆದ್ದರೆ ಮಹಿಳೆಯರಿಗೆ ಮಾಸಿಕ 2100 ರು. 500 ರು.ಗೆ ಸಿಲಿಂಡರ್, ವರ್ಷಕ್ಕೆ 2 ಉಚಿತ ಸಿಲಿಂಡರ್, ಯುವಕರಿಗೆ 2000 ರು. ನಿರುದ್ಯೋಗ ಭತ್ಯೆ ನೀಡುವ ಪ್ರಣಾಳಿಕೆಯ ಪುನರುಚ್ಚರಿಸಿದರು. ಅಂಶಗಳನ್ನು ರಾಜ್ಯಗಳ ದಿವಾಳಿ ಬಗ್ಗೆ ಖರ್ಗೆ ಸತ್ಯ ಹೇಳಿದ್ದಾರೆ ಕಾಂಗ್ರೆಸ್‌ನ ಕಾರ್ಯಸಾಧು ವಲ್ಲದ ಚುನಾವಣಾ ಗ್ಯಾರಂಟಿ ಗಳು ಹೇಗೆ ರಾಜ್ಯಗಳನ್ನು ದಿವಾಳಿ ಮಾಡಬಲ್ಲದು ಎಂಬ ಸತ್ಯ ವನ್ನು ಸ್ವತಃ ಖರ್ಗೆ ಹೇಳಿದ್ದಾರೆ. 

ಕಾಂಗ್ರೆಸ್‌ನ ಇಂಥ ಘೋಷಣೆಗಳಿಂದಾಗಿಯೇ ಇಂದು ಹಿಮಾಚಲ, ತೆಲಂಗಾ ಣ ಮತ್ತು ಕರ್ನಾಟಕದಂಥ ರಾಜ್ಯಗಳು ಆರ್ಥಿಕವಾಗಿ ವಿನಾಶವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದರಾಮಯ್ಯ ಬಳಿಕ ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಖುಷಿ: ಬಿ.ಕೆ.ಹರಿಪ್ರಸಾದ್‌
ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ