ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್ಸಿಗರ ಅವಹೇಳನ ಆರೋಪ: ಬಿಜೆಪಿ ವಕ್ತಾರ ಮಾಳವೀಯ ವಿರುದ್ಧ ಎಫ್‌ಐಆರ್‌

Published : Jun 29, 2023, 01:31 PM IST
ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್ಸಿಗರ ಅವಹೇಳನ ಆರೋಪ: ಬಿಜೆಪಿ ವಕ್ತಾರ ಮಾಳವೀಯ ವಿರುದ್ಧ ಎಫ್‌ಐಆರ್‌

ಸಾರಾಂಶ

ರಾಹುಲ್‌ ಗಾಂಧಿ ಅವರ ವಿದೇಶ ಪ್ರವಾಸವನ್ನು ಉಲ್ಲೇಖಿಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಅಮಿತ್‌ ಮಾಳವೀಯ ವಿಡಿಯೋ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಕಾಂಗ್ರೆಸ್‌ ನಾಯಕರ ಅಗೌರವ ತಂದಿದೆ ಎಂದು ಆರೋಪಿಸಿ ಹೈಗ್ರೌಂಡ್ಸ್‌ ಠಾಣೆಗೆ ತೆರಳಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು ದೂರು ನೀಡಿದ್ದರು. 

ಬೆಂಗಳೂರು(ಜೂ.29):  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್‌ ಮುಖಂಡರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದ ಮೇರೆಗೆ ಬಿಜೆಪಿ ವಕ್ತಾರ ಹಾಗೂ ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಇತ್ತೀಚಿಗೆ ರಾಹುಲ್‌ ಗಾಂಧಿ ಅವರ ವಿದೇಶ ಪ್ರವಾಸವನ್ನು ಉಲ್ಲೇಖಿಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಅಮಿತ್‌ ಮಾಳವೀಯ ವಿಡಿಯೋ ಅಪ್‌ಲೋಡ್‌ ಮಾಡಿದ್ದರು. ಈ ವಿಡಿಯೋ ಕಾಂಗ್ರೆಸ್‌ ನಾಯಕರ ಅಗೌರವ ತಂದಿದೆ ಎಂದು ಆರೋಪಿಸಿ ಹೈಗ್ರೌಂಡ್ಸ್‌ ಠಾಣೆಗೆ ತೆರಳಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ನೇತೃತ್ವದಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು ದೂರು ನೀಡಿದ್ದರು. ಅದರನ್ವಯ ಐಪಿಸಿ 153ಎ (ಪ್ರಚೋದನಾಕಾರಿ ಬರಹ ಪ್ರಕಟ) ಹಾಗೂ 120 ಜಿ (ಅಪರಾಧಿಕ ಒಳ ಸಂಚು) ಸೇರಿದಂತೆ ಇತರ ಪರಿಚ್ಛೇದಗಳಡಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧದ ಎಫ್‌ಐಆರ್‌ ರದ್ದತಿಗೆ ನಕಾರ

ಎಫ್‌ಐಆರ್‌ನಲ್ಲೇನಿದೆ?:

ತಮ್ಮ ಟ್ವಿಟರ್‌ ಖಾತೆಯಲ್ಲಿ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕರನ್ನು ಗುರಿಯಾಗಿಸಿ ವಿಡಿಯೋ ಪೋಸ್ಟ್‌ ಮಾಡಿ ಸಮಾಜವನ್ನು ಪ್ರಚೋದನೆಗೊಳಿಸುವಂತೆ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿದ್ದಾರೆ. ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರು ಅಂತಾರಾಷ್ಟ್ರೀಯ ಮಾಧ್ಯಮ ಜೊತೆಗಿನ ಒಡನಾಟವು ಭಾರತ ವಿರೋಧಿ ನಿರೂಪಣೆಯನ್ನು ಹರಡುವ ಮತ್ತು ಹಿಂದೂ ಉಗ್ರವಾದದ ಉದಯವನ್ನು ಬಿಂಬಿಸುವ ಮುಖ್ಯಾಂಶಗಳೊಂದಿಗೆ ಪತ್ರಿಕೆಗಳನ್ನು ಪ್ರದರ್ಶಿಸುತ್ತಿದೆ ಎಂದು ವಿಡಿಯೋ ಆರೋಪಿಸಿದೆ. 

ಇನ್ನೊಂದು ಆಂತಕಕಾರಿ ಅಂಶವೆಂದರೆ ಇಸ್ಲಾಮಿಕ್‌ ನಂಬಿಕೆಯ ಜನರೊಂದಿಗೆ ರಾಹುಲ್‌ ಗಾಂಧಿಯವರ ಸಂವಾದದ ಎಂದು ಅನಿಮೇಷನ್‌ ಮಾಡಿ ತಪ್ಪಾಗಿ ನಿರೂಪಿಸಲಾಗಿದೆ. ಅವಹೇಳನಕಾರಿ ಚಿತ್ರವನ್ನು ನಿಸ್ಸಂದೇಹವಾಗಿ ವಿವಿಧ ವರ್ಗಗಳ ಜನರ ನಡುವೆ ದ್ವೇಷವನ್ನು ಉಂಟು ಮಾಡುವುದಕ್ಕೆ ಕೋಮು ಸೌಹಾರ್ದತೆಯನ್ನು ಹಾಳು ಮಾಡುತ್ತದೆ. ಇದರಿಂದ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ ನಾಯಕರ ಗೌರವಕ್ಕೆ ಕುಂದು ತರುವ ರೀತಿಯಲ್ಲಿ ಸಮಾಜಕ್ಕೆ ತಪ್ಪು ಮಾಹಿತಿ ಹರುಡುವ ಹಾಗೂ ಗುಂಪುಗಳ ಮತ್ತು ಮತದಾರರ ನಡುವೆ ದ್ವೇಷವನ್ನು ಸೃಷ್ಟಿಸುವಲ್ಲಿ ಒಳ ಸಂಚನ್ನು ಮಾಡಿರುವ ಅಮಿತ್‌ ಮಾಳವೀಯ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಕ್ಕಿ ಅಕ್ರಮದಲ್ಲಿ ಬಿಜೆಪಿಯವರೇ ಶಾಮೀಲು: ಸಚಿವ ಪ್ರಿಯಾಂಕ್ ಖರ್ಗೆ
ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌