
ಕೋಲಾರ, (ಅ.02): ಮಾಜಿ ಸಚಿವ ವರ್ತೂರು ಪ್ರಕಾಶ್ ವಿರುದ್ಧ ಕೊರೋನಾ ನಿಯಮ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ ಚೊಕ್ಕ ಕನ್ವೆನ್ಷನ್ ಹಾಲ್ನಲ್ಲಿ ಕೊರೋನಾ ಗೈಡ್ಲೈನ್ಸ್ ಉಲ್ಲಂಘಿಸಿ ಸಭೆ ಮಾಡಿರುವುರಿಂದ ವರ್ತೂರು ಪ್ರಕಾಶ್ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಸೇರ್ಪಡೆಗೆ ಹಿರಿಯ ನಾಯಕ ಅಡ್ಡಗಾಲು: ವರ್ತೂರ್ ಪ್ರಕಾಶ್ ಕೆಂಡಾಮಂಡಲ
ಕೆಲವು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧ ಕಾರ್ಯಕರ್ತರ ಸಭೆಯನ್ನ ನಡೆಸಿದ್ದರು. ಕೋಲಾರ ನಗರದ ಕಲ್ಯಾಣ ಮಂಟಪ ಒಂದರಲ್ಲಿ ನಡೆದ ಸಭೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಈ ವೇಳೆ ಮಾಜಿ ಸಚಿವರು ಬಿರಿಯಾನಿ ಊಟ ಹಾಕಿಸಿದ್ದರು. ಆಗ ಕಾರ್ಯಕರ್ತರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನ ಕಾಪಾಡಿಕೊಳ್ಳದೇ ಭಾಗಿಯಾಗಿದ್ದರು. ಇದರಿಂದ ಕೊರೊನಾ ನಿಯಮ ಉಲ್ಲಂಘನೆ ಮಾಡಿರೋದು ಸ್ಪಷ್ಟವಾಗಿತ್ತು.
ಇನ್ನು ಈ ಕಾರ್ಯಕ್ರಮದಲ್ಲಿ ವರ್ತೂರು ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸೇರಿದಂತೆ ಹಲವು ಮುಖಂಡರುಗಳು ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.