
ಬೆಂಗಳೂರು, (ಆ.25): ನಗರದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಜೆಡಿಎಸ್ ವಕ್ತಾರನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ದೂರು ದಾಖಲಾಗಿದೆ. ಹೆಚ್ಡಿಕೆ ಗಜಪಡೆ ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಭದ್ರತೆ ಇದ್ದರೂ ಹಲ್ಲೆ ಮಾಡಿ, ಹತ್ಯೆ ಮಾಡುತ್ತೇವೆ ಎಂದು ಜಮೀರ್ ಅಹ್ಮದ್ ಖಾನ್ಗೆ ವಿಡಿಯೋ ಮೂಲಕ ಕೊಲೆ ಬೆದರಿಕೆ ಹಾಕಿದ್ದರು.
ಗೆಸ್ಟ್ಹೌಸ್ ವಿಷಯಕ್ಕೆ ಎಚ್ಡಿಕೆ - ಜಮೀರ್ ಗಲಾಟೆ
ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನವೀನ್ ಗೌಡ ಎಂಬುವವರು ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೆಸ್ಟ್ ಹೌಸ್ ಖಾಲಿ ಮಾಡಿಸುವ ವಿಚಾರದಲ್ಲಿ ಜಮೀರ್ ಮತ್ತು ಕುಮಾರಸ್ವಾಮಿ ನಡುವೆ ಮಾತಿಗೆ ಮಾತು ಬೆಳೆದಿತ್ತು. ಈ ಸಂಧರ್ಭದಲ್ಲಿ ಜಮೀರ್ ವಿರುದ್ದ ನರಸಿಂಹಮೂರ್ತಿ ವಿಡಿಯೋ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ .
ನವೀನ್ ಗೌಡ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ವಿಚಾರಣೆ ಮಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.