ಬಂದೇ ಬಾರಿಗೆ ಸಿಎಂ, ಪಿಎಂನಿಂದ ರೈತರಿಗೆ ಭರ್ಜರಿ ಗಿಫ್ಟ್...!

Published : Aug 09, 2020, 04:24 PM ISTUpdated : Aug 09, 2020, 06:59 PM IST
ಬಂದೇ ಬಾರಿಗೆ ಸಿಎಂ, ಪಿಎಂನಿಂದ ರೈತರಿಗೆ ಭರ್ಜರಿ ಗಿಫ್ಟ್...!

ಸಾರಾಂಶ

ಅತ್ತ ಪ್ರಧಾನಿ ನರೇಂದ್ರ ಮೋದಿ, ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿ ಇಬ್ಬರೂ ಒಂದೇ ಬಾರಿಗೆ ರೈತರಿಗೆ ಗುಡ್‌ ನ್ಯೂಸ್ ಕೊಟ್ಟಿದ್ದಾರೆ.

ಬೆಂಗಳೂರು, (ಆ.09): ಕೃಷಿ ಮೂಲಸೌಕರ್ಯ ನಿಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ರೆ, ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರಾಜ್ಯದ ರೈತರ ಖಾತೆಗಳಿಗೆ ಹಣ ಜಮಾ ಮಾಡಿದ್ದಾರೆ. 

"

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ರಾಜ್ಯದ ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಇಂದು ಭಾನುವಾರ) ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ ಎಂದಿದ್ದಾರೆ.

ಹೊಸ ವರ್ಷಕ್ಕೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್

ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಈ ಯೋಜನೆಯಡಿ ಈ ವರ್ಷದ ಮೂರು ಕಂತುಗಳ ಮೊದಲ  ಕಂತಿನಲ್ಲಿ 1049 ಕೋಟಿ ರೂಪಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಕೃಷಿ ಮೂಲಸೌಕರ್ಯ ನಿಧಿ ಯೋಜನೆಗೆ ಚಾಲನೆ
ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮೂಲಸೌಕರ್ಯ ನಿಧಿ ಯೋಜನೆಗೆ  ಭಾನುವಾರ ಚಾಲನೆ ನೀಡಿದರು. ಇದೇ ವೇಳೆ 8.5 ಕೋಟಿ ರೈತರಿಗೆ ಕಿಸಾನ್​ ಸಮ್ಮಾನ್​ ಯೋಜನೆಯ 6ನೇ ಕಂತಿನ 17 ಸಾವಿರ ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿ, ಒಟ್ಟು 1 ಲಕ್ಷ ಕೋಟಿ ರೂ. ಯೋಜನೆಗೆ ಚಾಲನೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇರಾನ್-ಇಸ್ರೇಲ್‌ ಯುದ್ಧ: ಭಾರತಕ್ಕೆ ರಫ್ತು, ಆಮದು ಆಗುವ ವಸ್ತುಗಳೇನು? ನಮ್ಮಲ್ಲಿ ಬೆಲೆ ಏರಿಕೆ ಆಗುತ್ತಾ?
ಪಾಕಿಸ್ತಾನ-ತಾಲಿಬಾನ್ ಸಂಘರ್ಷ; ಆಟ ಶುರು ಮಾಡಿದ ಅಮೆರಿಕದ ಡೊನಾಲ್ಡ್ ಟ್ರಂಪ್; ಭಾರತಕ್ಕೆ ಸಮಸ್ಯೆ?