
ಬೆಂಗಳೂರು/ಕಲಬುರಗಿ, (ಜು.30): ದಲಿತ ಕೋಟಾದಡಿಯಲ್ಲಿ ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಭೋವಿ (ವಡ್ಡರ) ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.
ಸಮುದಾಯದ ಮುಖಂಡರು ಇಂದು (ಶುಕ್ರವಾರ) ಬೆಂಗಳೂರಿನಲ್ಲಿ ಯಡಿಯೂರಪ್ಪ ನಿವಾಸದ ಎದುರು ಸುನೀಲ್ ವಲ್ಯಾಪುರೆ ಪರ ಘೋಷಣೆ ಕೂಗಿದರು.
ಚಿಂಚೋಳಿ ಉಪಚುನಾವಣೆಯ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನುಡಿದಂತೆ ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ ಅವರನ್ನು ದಲಿತ ಕೋಟಾದಡಿಯಲ್ಲಿ ಮಂತ್ರಿಸ್ಥಾನ ನೀಡಬೇಕು ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭೋವಿ(ವಡ್ಡರ) ಸಮುದಾಯದ ಮುಖಂಡರು ಒತ್ತಾಯಿಸಿದರು.
ಬಸವರಾಜ್ ಮತ್ತಿಮೂಡ್ಗೆ ಸಚಿವ ಸ್ಥಾನ ನೀಡುವಂತೆ ಬೃಹತ್ ಪ್ರತಿಭಟನಾ ಮೆರವಣಿಗೆ
ಕರ್ನಾಟಕ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭೋವಿ (ವಡ್ಡರ) ಸಮುದಾಯವು ಬಿ.ಜೆ.ಪಿ. ಪಕ್ಷಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಅದರಲ್ಲೂ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭೋವಿ (ವಡ್ಡರ) ಸಮುದಾಯ ಬಿ.ಜೆ.ಪಿ. ಪಕ್ಷಕ್ಕೆ ನಿರಂತರವಾಗಿ ಬೆಂಬಲ ಸೂಚಿಸಿದೆ.
ಈ ಭಾಗದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ನಮ್ಮ ಸಮುದಾಯದ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ವಲ್ಯಾಪುರೆ ಅವರ ಕೊಡುಗೆ ಅಪಾರವಾಗಿದೆ ಎಂದರು.
ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.