
ಮೈಸೂರು (ಆ.11): ಹಿಂದುಳಿದ ನಾಯಕರಾದ ದೇವರಾಜ ಅರಸು ಅವರನ್ನು ಅಧಿಕಾರದಿಂದ ಇಳಿಸಿದ್ದು, ಕಾಂಗ್ರೆಸಿನವರೇ. ಈಗ ನಿಮ್ಮನ್ನು ಇಳಿಸುವುದೂ ಕೂಡ ಶಿವಕುಮಾರ್ ಅವರೇ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಟಾಂಗ್ ನೀಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಮೈಸೂರು ಚಲೋ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು, ನಿನ್ನೆ ಇದೇ ವೇದಿಕೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡುವಾಗ ಗಂಟಲು ಹಾರಿ ಹೋಗಿತ್ತು. ತುಟ್ಟಿಗಳು ಒಣಗಿತ್ತು. ವಾಲ್ಮೀಕಿ, ಎಂಡಿಎ ಹಗರಣ ವಿಷಯದಲ್ಲಿ ಹೋರಾಟ ಮಾಡಲಾಗುತ್ತಿದೆ. ಇದು ಮುಂದುವರೆಯುತ್ತದೆ ಕೂಡ ಎಂದರು.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಶ್ರೀರಾಮುಲು
ಪ.ಜಾತಿ, ಪ.ಪಂಗಡಕ್ಕೆ ಮೀಸಲಾದ ಕೋಟ್ಯಂತರ ರೂಪಾಯಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ ಅವರು ಗೌರವಯುತವಾಗಿ ರಾಜೀನಾಮೆ ಕೊಟ್ಟರು. ಈಗ 14 ವರ್ಷದ ನಂತರ ನಿಮ್ಮ ಮೇಲೆ ಆರೋಪ ಬಂದಿದೆ. ನಾವೂ ಶ್ರೀರಾಮನ ವನವಾಸದಂತೆ ಪಾದಯಾತ್ರೆ ಮಾಡಿದ್ದೇವೆ. ನಿಮ್ಮ ರಾಜಿನಾಮೆ ಕೊಡುವತನಕ ಹೋರಾಟ ಬಿಡುವುದಿಲ್ಲ. ನಾವು ಜಗ್ಗಲ್ಲ, ಬಗ್ಗಲ್ಲ ಎಂಬುವರಿಗೆ ಕಾರ್ಯಕರ್ತರು ಮನಸ್ಸು ಮಾಡಿದರೆ ಎಂಥ ಬಂಡೆಯು ಪುಡಿಪುಡಿ ಆಗಬೇಕು. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.