ವೋಟ್‌ ಜಿಹಾದ್‌ ಮಾಡಿದರೆ ಲವ್‌ ಜಿಹಾದ್‌ ಬೆಂಬಲಿಸುವ ಕಾಂಗ್ರೆಸ್‌ ಅಧಿಕಾರದಲ್ಲಿರೊಲ್ಲ: ಸಿ.ಟಿ.ರವಿ

Published : May 05, 2024, 03:40 PM IST
ವೋಟ್‌ ಜಿಹಾದ್‌ ಮಾಡಿದರೆ ಲವ್‌ ಜಿಹಾದ್‌ ಬೆಂಬಲಿಸುವ ಕಾಂಗ್ರೆಸ್‌ ಅಧಿಕಾರದಲ್ಲಿರೊಲ್ಲ: ಸಿ.ಟಿ.ರವಿ

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮಾತ್ರ ಯಾಕೆ ಇಂಥ ಅನಿಷ್ಟಗಳು ಸಂಭವಿಸುತ್ತವೆ? ಒಂದು ವಾರದ ಅವಧಿಯಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ನೇಹಾ ಹಿರೇಮಠ ಹತ್ಯೆ, ದಲಿತ ಯುವಕನ ಹತ್ಯೆ, ಬಿಜೆಪಿ ಕಾರ್ಯಕರ್ತನ ಕೊಲೆ, ಜೈ ಶ್ರೀರಾಮ್ ಎಂದದ್ದಕ್ಕೆ ಥಳಿತ, ಮೋದಿ ಕುರಿತು ಹಾಡು ಬರೆದವನಿಗೆ ಹಲ್ಲೆ ನಡೆದಿದೆ: ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 

ಸಿದ್ದಾಪುರ(ಮೇ.05): ದೇಶ, ಧರ್ಮ ಉಳಿಸಿಕೊಳ್ಳುವ ಚುನಾವಣೆ ಇದು. ನಮ್ಮಲ್ಲೂ ವೋಟ್ ಜಿಹಾದ್ ನಡೆದರೆ ಲವ್ ಜಿಹಾದ್‌ಗೆ ಬೆಂಬಲಿಸುವ ಕಾಂಗ್ರೆಸ್ ದೇಶದಲ್ಲೆಲ್ಲೂ ಗೆಲ್ಲೋದಿಲ್ಲ. ದೇಶ ಮತ್ತು ಧರ್ಮದ ಬಗ್ಗೆ ಅಭಿಮಾನವಿದ್ದವರು ಯಾರೂ ಕಾಂಗ್ರೆಸಿಗೆ ಮತ ಹಾಕೋದಿಲ್ಲ. ಕೇವಲ ಮತಾಂತರ, ಲವ್ ಜಿಹಾದ್‌ಗೆ ಬೆಂಬಲಿಸುವವರು ಮಾತ್ರ ಅದಕ್ಕೆ ಮತ ಹಾಕುತ್ತಾರೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಅವರು ಹೆಗ್ಗರಣಿಯ ಬಿಜೆಪಿ ಮಹಾಶಕ್ತಿ ಕೇಂದ್ರದ ಅಡಿಯಲ್ಲಿ ತಂಡಾಗುಂಡಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮಾತ್ರ ಯಾಕೆ ಇಂಥ ಅನಿಷ್ಟಗಳು ಸಂಭವಿಸುತ್ತವೆ? ಒಂದು ವಾರದ ಅವಧಿಯಲ್ಲಿ ರಾಜ್ಯದ ವಿವಿಧೆಡೆಗಳಲ್ಲಿ ನೇಹಾ ಹಿರೇಮಠ ಹತ್ಯೆ, ದಲಿತ ಯುವಕನ ಹತ್ಯೆ, ಬಿಜೆಪಿ ಕಾರ್ಯಕರ್ತನ ಕೊಲೆ, ಜೈ ಶ್ರೀರಾಮ್ ಎಂದದ್ದಕ್ಕೆ ಥಳಿತ, ಮೋದಿ ಕುರಿತು ಹಾಡು ಬರೆದವನಿಗೆ ಹಲ್ಲೆ ನಡೆದಿದೆ. ಕೆಲವು ದಿನಗಳ ಹಿಂದೆ ಜೈನ ಮುನಿಗಳ ಹತ್ಯೆ ನಡೆದಿದೆ. ಕಾಂಗ್ರೆಸಿಗೂ, ದನಗಳ್ಳತನಕ್ಕೂ ಯಾವುದೋ ನಂಟಿದೆ. ದೇಶದ ಹೊರಗಿನ ಭಯೋತ್ಪಾದನೆ, ದೇಶದ ಒಳಗಿನ ದುಷ್ಟಕೃತ್ಯ, ಭ್ರಷ್ಟಾಚಾರ ತಡೆಯಲು ಮೋದಿ ನೇತೃತ್ವದ ಬಿಜೆಪಿ ಅಗತ್ಯ ಎಂದರು.

ಉತ್ತರ ಕನ್ನಡ: ರೂಪಾಲಿ ನಾಯ್ಕ ಬಿರುಸಿನ ಪ್ರಚಾರ, ಬಿಜೆಪಿಗೆ ಬಲ

ಜಾಗತಿಕವಾಗಿ ಭಾರತಕ್ಕೆ ಗೌರವ ದೊರೆಯುತ್ತಿದೆ. ಕಳೆದ ೧೦ ವರ್ಷಗಳಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭವ್ಯತೆಯ ಕಡೆಗೆ ಭಾರತ ಸಾಗುತ್ತಿದೆ. ನಾವು ತಪ್ಪು ಮಾಡಿದರೆ ಅದನ್ನು ಕಳೆದುಕೊಳ್ಳುತ್ತೇವೆ. ಆದ್ದರಿಂದ ಮತದಾರರು ಮೈ ಮರೆಯದೇ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಹೇಳಿದರು.

ದೇಶವನ್ನು ಎತ್ತಿಕಟ್ಟುವ ಶಕ್ತಿ ನಮ್ಮ ಮತಕ್ಕಿದೆ. ಭಾರತಕ್ಕೆ ಏನು ಅನುಕೂಲ ಎಂದು ನೋಡಿ ತೀರ್ಮಾನಿಸುವುದು ಪ್ರಸಕ್ತ ದೇಶದ ನೀತಿ. ಕಾಂಗ್ರೆಸಿನದು ರಿವರ್ಸ್‌ ಗೇರ್, ಅಂದರೆ ಮತ್ತೆ ಅಧಿಕಾರಕ್ಕೆ ಬಂದು ಲೂಟಿ ಹೊಡೆಯಬೇಕು ಎನ್ನುವುದು. ಇದು ಜಾತಿ ಗೆಲ್ಲಿಸುವ ಚುನಾವಣೆ ಅಲ್ಲ, ಭಾರತ ಗೆಲ್ಲಿಸುವ ಚುನಾವಣೆ. ಒಂದೊಂದು ಮತವೂ ಅಮೂಲ್ಯವಾಗಿದ್ದು, ಬಿಜೆಪಿ ಬೆಂಬಲಿತರಲ್ಲದೇ ಕಾಂಗ್ರೆಸಿಗರ ಮನೆಗೂ ಹೋಗಿ ಯಾಕೆ ಮೋದಿ ಪ್ರಧಾನಿಯಾಗಬೇಕು ಎನ್ನುವುದನ್ನು ಮನವರಿಕೆ ಮಾಡಿ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಜೆಡಿಎಸ್ ಜಿಲ್ಲಾ ಪ್ರಮುಖ ಉಪೇಂದ್ರ ಪೈ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ., ಪ್ರಮುಖರಾದ ಗುರುಪ್ರಸಾದ ಹೆಗಡೆ, ಮಾರುತಿ ನಾಯ್ಕ ಹೊಸೂರು, ಎಂ.ಜಿ. ಹೆಗಡೆ, ಮಹಾಬಲೇಶ್ವರ ಹೆಗಡೆ, ತೋಟಪ್ಪ ನಾಯ್ಕ ಮುಂತಾದವರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ