ಮೋದಿ ಮಣಿಸುವ ಪ್ರತಿಪಕ್ಷಗಳ ಹವಣಿಕೆ ಕೈಗೂಡದು: ಮಾಜಿ ಸಿಎಂ ಬೊಮ್ಮಾಯಿ

Published : Jul 17, 2023, 12:00 AM IST
ಮೋದಿ ಮಣಿಸುವ ಪ್ರತಿಪಕ್ಷಗಳ ಹವಣಿಕೆ ಕೈಗೂಡದು: ಮಾಜಿ ಸಿಎಂ ಬೊಮ್ಮಾಯಿ

ಸಾರಾಂಶ

ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ. ಇವುಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷ ಗಳಾಗಿ ಕೆಲಸ ಮಾಡುತ್ತಿವೆ ಅಷ್ಟೆ. ಜು.17ರಂದು ನಡೆಯುವ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿ ಸಬೇಕು ಎಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ: ಬಸವರಾಜ ಬೊಮ್ಮಾಯಿ 

ಹುಬ್ಬಳ್ಳಿ(ಜು.17):  ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಒಂದೇ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಇದು ಅಸಾಧ್ಯವಾದ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ. ಇವುಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷ ಗಳಾಗಿ ಕೆಲಸ ಮಾಡುತ್ತಿವೆ ಅಷ್ಟೆ. ಜು.17ರಂದು ನಡೆಯುವ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿ ಸಬೇಕು ಎಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದರು.

ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಸಿಲುಕಿರುವ ಭಯ: ಬೊಮ್ಮಾಯಿ

ಎಚ್‌ಡಿಡಿ ಜತೆ ಮಾತುಕತೆ: ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಷಯ ಕುರಿತು ಮಾತನಾಡಿದ ಬೊಮ್ಮಾಯಿ, ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ಹೈಕಮಾಂಡಿಗೆ ಬಿಟ್ಟವಿಚಾರ. ಪಕ್ಷದ ವರಿಷ್ಠರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ನಡುವೆ ಮಾತುಕತೆಯಾಗಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೆಲವೊಂದಿಷ್ಟುಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶ್ರುತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ. ವಿಪಕ್ಷ ಸ್ಥಾನ ಜು.18ರ ನಂತರ ಘೋಷಣೆ ಆಗಬಹುದು ಎಂದ ಅವರು, ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ಕೇವಲ ಉಹಾಪೋಹ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!