ಸಿ.ಟಿ.ರವಿಗೆ ಅನ್ಯಾಯವಾಗಿದೆ, ಸರಿಪಡಿಸುತ್ತೇವೆ: ಯಡಿಯೂರಪ್ಪ

Published : Apr 12, 2024, 09:26 AM IST
ಸಿ.ಟಿ.ರವಿಗೆ ಅನ್ಯಾಯವಾಗಿದೆ, ಸರಿಪಡಿಸುತ್ತೇವೆ: ಯಡಿಯೂರಪ್ಪ

ಸಾರಾಂಶ

ವಿಧಾನಸೌಧದಲ್ಲಿ ಗುಡುಗುವಂಥವರು ಹೊರಗಿದ್ದಾರೆ. ನಾನು ಇದನ್ನು ಸಹಿಸುವುದಿಲ್ಲ. ವಿಧಾನ ಪರಿಷತ್ ಅಥವಾ ವಿಧಾನಸಭೆಯಲ್ಲಿ ಅವಕಾಶ ದೊರಕಿಸಿಕೊಡುವ ಮೂಲಕ ಸಿ.ಟಿ.ರವಿಗೆ ಆದ ಅನ್ಯಾಯ ತುಂಬಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಖಂಡಿತ ಮಾಡುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 

ಕಡೂರು(ಏ.12): ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ವಿಧಾನ ಪರಿಷತ್‌ ಅಥವಾ ವಿಧಾನಸಭೆಯಲ್ಲಿ ಅವಕಾಶ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಸಿ.ಟಿ.ರವಿ ಅವರು ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ತಮಗಾದ ಸೋಲಿನ ಕುರಿತು ವ್ಯಕ್ತಪಡಿಸಿದ ನೋವನ್ನು ಆಲಿಸಿದ ಬಳಿಕ ಯಡಿಯೂರಪ್ಪ ಈ ಭರವಸೆ ನೀಡಿದರು.

ಲೋಕಸಭೆ ಚುನಾವಣೆ 2024: ಗೃಹಲಕ್ಷ್ಮಿ ಹಣ ಜಯಪ್ರಕಾಶ್ ಹೆಗಡೆಗೆ ದೇಣಿಗೆ ನೀಡಿದ ಮಹಿಳೆ..!

ವಿಧಾನಸೌಧದಲ್ಲಿ ಗುಡುಗುವಂಥವರು ಹೊರಗಿದ್ದಾರೆ. ನಾನು ಇದನ್ನು ಸಹಿಸುವುದಿಲ್ಲ. ವಿಧಾನ ಪರಿಷತ್ ಅಥವಾ ವಿಧಾನಸಭೆಯಲ್ಲಿ ಅವಕಾಶ ದೊರಕಿಸಿಕೊಡುವ ಮೂಲಕ ಸಿ.ಟಿ.ರವಿಗೆ ಆದ ಅನ್ಯಾಯ ತುಂಬಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಖಂಡಿತ ಮಾಡುತ್ತೇನೆ ಎಂದರು. ಆಗ ನೆರೆದಿದ್ದ ಕಾರ್ಯಕರ್ತರು ಜೋರಾಗಿ ಚಪ್ಪಳೆ ತಟ್ಟಿ ಸ್ವಾಗತಿಸಿದರು.

ಇದಕ್ಕೂ ಮೊದಲು ಮಾತನಾಡಿದ ಸಿ.ಟಿ.ರವಿ, ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿದ ನನಗೆ ಓಟು ಹಾಕದಂತೆ ಅಪಪ್ರಚಾರ ನಡೆಸಿದರು. ನನ್ನ ಗ್ರಹಚಾರ ಸರಿಯಿರಲಿಲ್ಲ. ಜೆಡಿಎಸ್ ಸಹ ಅವರನ್ನೇ ಬೆಂಬಲಿಸಿತು ಎಂದು ಪರೋಕ್ಷವಾಗಿ ವೇದಿಕೆಯಲ್ಲಿದ್ದ ಭೋಜೇಗೌಡರು ಮತ್ತಿತರ ಮುಖಂಡರಿಗೆ ಕುಟುಕಿದರು.

ಹೋರಾಟ ಮತ್ತು ಹಿಂದುತ್ವದ ಪ್ರೇರಣೆಯಿಂದಲೇ ಬಿಜೆಪಿಗೆ ಬಂದ ನನ್ನ ಮತ್ತು ಯಡಿಯೂರಪ್ಪ ನಡುವೆ ಹುಳಿ ಹಿಂಡುವ ಕಾರ್ಯವೂ ನಡೆಯಿತು. ಮೈ ಮರೆತು ಮತ ನೀಡಿದ ಪರಿಣಾಮ ಯಾರ ಕಾಲ್ಗುಣವೋ ಈಗ ಹಕ್ಕಿ ಕುಡಿಯಲೂ ನೀರಿಲ್ಲ. ದಿನದ ಕೂಳಿಗೆ ಹೋಗಿ ವರ್ಷದ ಕೂಳು ಕಳೆದುಕೊಳ್ಳುವ ಸ್ಥಿತಿ ಕ್ಷೇತ್ರಕ್ಕೆ ಬಂದಿದೆ. ದುಡಿಯುವ ಎತ್ತಿಗೆ ಮೇವು ಹಾಕದೆ ಕಳ್ಳೆತ್ತಿಗೆ ಮೇವು ಹಾಕಿದರೆ ಇದೇ ಸ್ಥಿತಿ ಮುಂದುವರಿಯುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ
ಸಿದ್ದರಾಮಯ್ಯ ಹೆಲಿಕಾಪ್ಟರ್‌ ಪ್ರಯಾಣಕ್ಕೆ ರಾಜ್ಯದ ಬೊಕ್ಕಸದಿಂದ ಕೋಟ್ಯಂತರ ಖರ್ಚು!