ಬಿಜೆಪಿಗೆ 40 ಸೀಟು ಎನ್ನುವ ರಾಹುಲ್‌ ವೈದ್ಯ ಪರೀಕ್ಷೆಗೆ ಒಳಗಾಗಲಿ: ಯಡಿಯೂರಪ್ಪ

Published : Apr 30, 2023, 01:31 PM IST
ಬಿಜೆಪಿಗೆ 40 ಸೀಟು ಎನ್ನುವ ರಾಹುಲ್‌ ವೈದ್ಯ ಪರೀಕ್ಷೆಗೆ ಒಳಗಾಗಲಿ: ಯಡಿಯೂರಪ್ಪ

ಸಾರಾಂಶ

140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಯಾರ ಹಂಗಿಲ್ಲದೆ ಈ ಬಾರಿ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚಿಸುತ್ತೇವೆ ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೇರಲಿದೆ ಎಂಬ ಸಮೀಕ್ಷೆಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ 

ಹುಣಸಗಿ(ಯಾದಗಿರಿ)(ಏ.30):  ಹಿಂದು, ಮುಸ್ಲಿಂ ಹಾಗೂ ಕ್ರಿಶ್ಚಿಯನ್‌ ಎಲ್ಲರೂ ಒಂದೇ ತಾಯಿ ಮಕ್ಕಳು. ಇದು ಬಿಜೆಪಿ ತತ್ವವಾಗಿದ್ದು, ನನಗೆ ಯಾವ ಜಾತಿ ಧರ್ಮ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

ಸುರಪುರ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ್‌ (ರಾಜೂಗೌಡರ) ಪರ ರೋಡ್‌ ಶೋಗೆಂದು ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, 140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಯಾರ ಹಂಗಿಲ್ಲದೆ ಈ ಬಾರಿ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚಿಸುತ್ತೇವೆ ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೇರಲಿದೆ ಎಂಬ ಸಮೀಕ್ಷೆಗಳಿಗೆ ತಿರುಗೇಟು ನೀಡಿದರು. ಬಿಜೆಪಿಗೆ 40 ಸ್ಥಾನಗಳು ಮಾತ್ರ ಸಿಗುತ್ತವೆ ಎಂಬುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಲು ಹೇಳಬೇಕು ಎಂದು ವ್ಯಂಗ್ಯವಾಡಿದರು.

ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್‌, ಕಮಲ ಬಂಡಾಯ, ಜೆಡಿಎಸ್‌ಗೆ ಲಾಭ?

ಭಾಗ್ಯಲಕ್ಷ್ಮೀ ಯೋಜನೆ ಸೇರಿ ಹಲವು ಯೋಜನೆಗಳನ್ನು ಕೊಟ್ಟಿದ್ದೇನೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರುಪಾಯಿ ಅನುದಾನ ನೀಡಲಾಗಿದೆ. ಭಾರತವನ್ನು ಇಡೀ ಜಗತ್ತಿನಲ್ಲಿ ಗುರುತಿಸುವಂತೆ ಪ್ರಧಾನಿ ಮೋದಿ ಮಾಡಿದ್ದಾರೆ. ಮೋದಿ ನಾಯಕತ್ವದಲ್ಲಿ ಇಡೀ ಜಗತ್ತು ಅಚ್ಚರಿಯಿಂದ ನಮ್ಮ ಕಡೆ ನೋಡುತ್ತಿದೆ. ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಣೆ ಅಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ