
ಬೆಂಗಳೂರು(ಸೆ.18): ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಹೇಳಿರುವುರು ಭಾಷಾ ತಿರಸ್ಕಾರದ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕನ್ನಡ ರಾಷ್ಟ್ರಭಾಷೆಯೇ, ಕೇಂದ್ರವು ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ. ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ ಎಂದು ತಿಳಿಸಿದ್ದಾರೆ.
'ನಿರ್ಮಲಾ ಸೀತಾರಾಮನ್ ಹೇಳಿದಂತೆ ದೇವರೇ ಬಿಎಸ್ವೈ ಸರ್ಕಾರ ಕಾಪಾಡಬೇಕು'
ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಅವರು ಗುರುವಾರ ಟ್ವೀಟರ್ನಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.