
ರಾಮನಗರ, (ಜ.11): ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ಸರ್ಕಾರ ವಿರುದ್ಧ ಗುಡುಗಿದ್ದಾರೆ. ಅಲ್ಲದೇ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದಾರೆ.
ರಾಮನಗರದಲ್ಲಿ ಇಂದು (ಸೋಮವಾರ) ಮಾತನಾಡಿದ ಕುಮಾರಸ್ವಾಮಿ, ಇಲ್ಲಿನ ಉಪನೋಂದಣಾಧಿಕಾರಿ(ಎಸಿ)ಯನ್ನ ತಗೆಯಬೇಕು ಎಂದು ನಿರ್ಧಾರ ಮಾಡಿದ್ದೆ. ಮುಖ್ಯಮಂತ್ರಿಗಳು ಕೂಡ ಆದೇಶದ ಮಾಡಿದ್ದರು. ನಂತರ ಅಲ್ಲಿ ಏನೇನು ಆಟ ನಡೆದಿದೆ ಎಂಬುದು ನನಗೆಲ್ಲ ಗೊತ್ತಿದೆ. ಸಿಎಂ ಕಚೇರಿಯಿಂದ ಯಾರ್ಯಾರಿಗೆ ಪೇಮೆಂಟ್ ಆಗಿದೆ ಅಂತಾನೂ ಗೊತ್ತಿದೆ. ನಾನು ನೇರವಾಗಿ ಹೇಳ್ತಿದ್ದೇನೆ. ಇಲ್ಲಿನ ಎಸಿ ನನಗೆ 3 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು ಎಂದು ಗಂಭೀರ ಆರೋಪ ಮಾಡಿದರು.
ರಾಧಿಕಾ ಬಗ್ಗೆ ಕೊನೆಗೂ ಮೌನ ಮುರಿದ ಕುಮಾರಸ್ವಾಮಿ...!
ವರ್ಗಾವಣೆ ತಡೆಯಲು ಕಮಿಷನ್ ಕೊಡು ಎಸಿ ರಾಮನಗರದ ಜನರನ್ನು ಉಳಿಸುತ್ತಾರಾ? ಅವರಿವರಿಗೆ ಕೊಟ್ಟ ಹಣವನ್ನ ಜನರಿಂದಲೇ ಅವರು ವಸೂಲಿ ಮಾಡಬೇಕಾಗುತ್ತೆ. ಇಲ್ಲಿನ ಅಧಿಕಾರಿಗಳು ಏಜೆಂಟ್ಗಳ ಮೂಲಕ ಹಣ ಕೊಟ್ಟು ನಂತರ ಜನರ ಜೇಬಿಗೆ ಕೈ ಹಾಕುತ್ತಾರೆ. ಈ ಸರ್ಕಾರಕ್ಕೆ ಮರ್ಯಾದೆ ಇದ್ರೆ ಇಂತಹ ಅಧಿಕಾರಿಗಳನ್ನ ಹಿಟ್ಟುಕೊಳ್ಳಲ್ಲ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ನಾನು ಮಾತನಾಡುತ್ತಿಲ್ಲ. ರಾಜ್ಯದ ಜನತೆ ಮತ್ತು ಬಿಜೆಪಿ ಶಾಸಕರೇ ಆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ಸಿಪಿವೈಗೆ ಎಚ್ಡಿಕೆ ಟಾಂಗ್
ಇನ್ನು ಸಿ.ಪಿ.ಯೋಗೇಶ್ವರ್ ವಿರುದ್ಧವೂ ಕಿಡಿಕಾರಿದ ಎಚ್ಡಿಕೆ, ಯೋಗೇಶ್ವರ್ ವಸೂಲಿ ಬಗ್ಗೆ ಊರುಗಳಲ್ಲೇ ಚರ್ಚೆ ಆಗುತ್ತಿದೆ, ಇದನ್ನ ನಾನು ಆರೋಪ ಮಾಡುತ್ತಿಲ್ಲ ಎಂದರು.
ಇನ್ನು ನಮ್ಮ ಕುಟುಂಬ ಯಾರಿಗೂ ರಾಜಿಯಾಗಲ್ಲ. ಪ್ರಧಾನಮಂತ್ರಿಯನ್ನೇ ನೋಡಿರುವ ಕುಟುಂಬ ನಮ್ಮದು. ಹಾಗಾಗಿ ಒಂದು ಮಂತ್ರಿ ಸ್ಥಾನಕ್ಕೆ ಹೆದರುತ್ತಾನಾ? ಯೋಗೇಶ್ವರ್ ಮಂತ್ರಿಯಾಗಿದ್ದಾಗಲೇ ಸೋಲಿಸಿದ್ದೇವೆ. ಚನ್ನಪಟ್ಟಣಕ್ಕೆ ನಾನು ಚುನಾವಣೆಯಲ್ಲಿ ಹೋಗಿರಲಿಲ್ಲ. ಆದರೂ ಕ್ಷೇತ್ರದ ಜನತೆಯೇ ನನಗೆ ಆಶೀರ್ವಾದ ಮಾಡಿದರು. ಇಂತಹ ಮಂತ್ರಿ ಸ್ಥಾನಗಳನ್ನ ಎಷ್ಟು ನೋಡಿಲ್ಲ ನಾನು ಎಂದು ಸಿಪಿವೈ ವಿರುದ್ಧ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.