
ಮೈಸೂರು(ಏ.19): ದೇವೇಗೌಡರ ಕುಟುಂಬದವರು ಕಲ್ಲು ಒಡೆಯುತ್ತಿದ್ದರು ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು, ಸರ್ಕಾರದ ರೆಕಾರ್ಡ್ ತಿದ್ದಿ, ಅಮಾಯಕರ ಭೂಮಿ ಯನ್ನು ಧಮ್ಮಿ ಹಾಕಿ ದಬ್ಬಾಳಿಕೆಯಿಂದ ಕಿತ್ತು ಕಲ್ಲು ಒಡೆಯುತ್ತಿದ್ದರಲ್ವ, ಅದನ್ನು ಮಾಡಿದವರು ಯಾರು ಅಂತ ಮೊದಲು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.
ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿ ಇರುವುದೇ ಡೌಟ್: ಎಚ್.ಡಿ.ಕುಮಾರಸ್ವಾಮಿ
ಸಾವಿರಾರು ಜನ ಕಲ್ಲಿನ ಬ್ಯುಸಿನೆಸ್ ಮಾಡುತ್ತಾರೆ. ಯಾರು ಕಲ್ಲು ಒಡೆಯುತ್ತಿದ್ದರು, ಕಳ್ಳತನದಿಂದ ಕಾನೂನು ಬಾಹಿರವಾಗಿ ಯಾರು ಕಲ್ಲು ಒಡೆದರು ಎಂಬ ಕುರಿತು ದಾಖಲೆಬಿಡುಗಡೆಮಾಡಲಿ. ನಮ್ಮ ಕುಟುಂಬಸ್ಥರು ಅಥವಾ ಬೇರಿನ್ಯಾವ ಕುಟುಂ ಬಸ್ಥರ ದಾಖಲೆ ಇದ್ದರೂ ಬಿಡುಗಡೆ ಮಾಡಲಿ. ನಾನು ಆ ವ್ಯವಹಾರ ಮಾಡಿಲ್ಲ. ನನ್ನ ಕುಟುಂಬ ಎಂದರೆ ನಾನು, ನನ್ನ ಹೆಂಡತಿ, ಮಗ, ಸೊಸೆ ಮೊಮ್ಮಗ ಅಷ್ಟೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.