ಸುಮಲತಾ ದೊಡ್ಡವರು, ಅವರ ಬಗ್ಗೆ ಮಾತಾಡುವಷ್ಟು ನಾನು ಬೆಳೆದಿಲ್ಲ: ಎಚ್‌ಡಿಕೆ

Published : Mar 11, 2023, 11:11 AM IST
ಸುಮಲತಾ ದೊಡ್ಡವರು, ಅವರ ಬಗ್ಗೆ ಮಾತಾಡುವಷ್ಟು ನಾನು ಬೆಳೆದಿಲ್ಲ: ಎಚ್‌ಡಿಕೆ

ಸಾರಾಂಶ

ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ವಿಷಯ ಯಾರಿಗೇನೂ ಅಚ್ಚರಿ ಮೂಡಿಸುವ ಸುದ್ದಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. 

ಹಾಸನ (ಮಾ.11): ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ವಿಷಯ ಯಾರಿಗೇನೂ ಅಚ್ಚರಿ ಮೂಡಿಸುವ ಸುದ್ದಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಬಹಳ ದೊಡ್ಡವರಿದ್ದಾರೆ, ದೊಡ್ಡ ಪಕ್ಷಕ್ಕೆ ಸೇರಿದ್ದಾರೆ. ಅವರ ಬಗ್ಗೆ ಮಾತನಾಡುವಷ್ಟುದೊಡ್ಡಮಟ್ಟಕ್ಕೆ ನಾನು ಬೆಳೆದಿಲ್ಲ. ಈ ಕುರಿತು ಮಂಡ್ಯ ಜಿಲ್ಲೆಯ ಜನತೆ ತೀರ್ಮಾನ ಮಾಡುತ್ತಾರೆ. ನಾನೊಬ್ಬ ಸಣ್ಣವನು, ಅವರ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು. 

ಇನ್ನು, ಕುಟುಂಬ ರಾಜಕಾರಣದ ಕುರಿತು ಸಂಸದೆ ಸುಮಲತಾ ಮಾತಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ರಾಜ್ಯದ ಆರೂವರೆ ಕೋಟಿ ಜನತೆ ನನ್ನ ಕುಟುಂಬ ಆ ಕುಟುಂಬಕ್ಕೆ ರಾಜಕೀಯ ಮಾಡ್ತಿದ್ದೇನೆ ಎಂದರು. ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹಣ ತಂದಿದ್ದೇನೆ ಎಂಬ ಸುಮಲತಾ ಹೇಳಿಕೆ ಕುರಿತು ಮಾತನಾಡಿದ ಅವರು, ತಂದಿರಬಹುದು ನನ್ನ ಕೇಳಿದರೆ ನಾನೇನು ಹೇಳಲಿ? ಹಾಗೊಂದು ವೇಳೆ ನಮ್ಮ ಭದ್ರಕೋಟೆಯಲ್ಲಿ ಅವರೇನಾದರೂ ಒಳ್ಳೆಯ ಕೆಲಸಗಳನ್ನು ಮಾಡಿದ್ದರೆ, ನಮ್ಮ ಜನತೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕಟುಕಿದರು.

ಜೆಡಿಎಸ್‌ನಿಂದ ಜನತೆಗೆ ನೆಮ್ಮದಿಯ ಬದುಕು: ಎಚ್‌.ಡಿ.ಕುಮಾರಸ್ವಾಮಿ

50 ದಿನದಲ್ಲಿ ಜೆಡಿಎಸ್‌ ಅಧಿಕಾರಕ್ಕೆ: ನಾಲ್ಕು ವರ್ಷಗಳ ಕಾಲ ಈ ರೈತ ವಿರೋಧಿ ಸರ್ಕಾರ ನೀಡಿದ ಕಿರುಕುಳವನ್ನು ತಡೆದುಕೊಂಡಿದ್ದೀರಿ. ಇನ್ನು 50 ದಿನ ತಾಳಿ, ನಿಮ್ಮ ನಿರೀಕ್ಷೆಯ ಜಾತ್ಯತೀತ ಜನತಾದಳ ಸರ್ಕಾರವೇ ರಾಜ್ಯದಲ್ಲಿ ಆಡಳಿತಕ್ಕೆ ಬರಲಿದ್ದು, ರೈತಾಪಿಗಳ ಸಮಸ್ಯೆ ದೂರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ತಿಪಟೂರು ಮಾರ್ಗವಾಗಿ ತೆರಳುವ ವೇಳೆ ತಾಲೂಕು ಕಚೇರಿ ಮುಂಭಾಗ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹಮ್ಮಿಕೊಂಡಿದ್ದ ಅಹೋರಾತ್ರಿ ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ, ರೈತಾಪಿಗಳನ್ನು ಹಾಗೂ ಜೆಡಿಎಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕೊಬ್ಬರಿ ಬೆಂಬಲ ಬೆಲೆ ಘೋಷಣೆ ಸೇರಿದಂತೆ ತಾಲೂಕಿನ ವಿವಿಧ ಸಮಸ್ಯೆಗಳ ಕುರಿತು ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವನ್ನು ಕೈ ಬಿಡಲು ಸೂಚನೆ ನೀಡಿದರು. ಕೃಷ್ಣಪ್ಪ ಸತ್ಯಾಗ್ರಹವನ್ನು ಮುಂದೂಡಿದರು. ಈ ಸಂದರ್ಭದಲ್ಲಿ ರಾಜ್ಯ ಯುವ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟಚಂದ್ರೇಶ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ಸ್ವಾಮಿ, ಯುವ ಘಟಕದ ಅಧ್ಯಕ್ಷ ಬಾಣಸಂದ್ರ ರಮೇಶ್‌, ವಕ್ತಾರ ಯೋಗೀಶ್‌, ಮುಖಂಡರಾದ ಬೂವನಹಳ್ಳಿ ದೇವರಾಜ್‌, ಹೆಡಿಗೇಹಳ್ಳಿ ವಿಶ್ವನಾಥ್‌, ವಿಜಯಕುಮಾರ್‌, ಕಣತೂರು ಪ್ರಸನ್ನ, ರಾಜೀವ್‌ ಕೃಷ್ಣಪ್ಪ, ರಾಮಕೃಷ್ಣ, ಸಿ ಎಸ್‌ ಪುರ ಬಸವರಾಜು, ವಿಠಲದೇವರಹಳ್ಳಿ ಹರೀಶ್‌ ಸೇರಿದಂತೆ ಹಲವಾರು ಮುಖಂಡರು ಇದ್ದರು.

ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂಬ ಇಬ್ರಾಹಿಂ ಹೇಳಿಕೆ ಅಹಂಕಾರದ ಮಾತಲ್ಲ: ಎಚ್‌ಡಿಕೆ

ರಾಮರಾಜ್ಯ ನಿರ್ಮಾಣ: ಐದು ವರ್ಷದ ಅವಧಿಗೆ ನಮ್ಮ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಈ ರಾಜ್ಯವನ್ನು ರಾಮರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷಕ್ಕೆ ಪೂರ್ಣ ಅಧಿಕಾರ ನೀಡಿದರೆ ರಾಜ್ಯದ ಪ್ರತಿ ಗ್ರಾಮಗಳಲ್ಲಿ ಇಂಗ್ಲಿಷ್‌ ಹಾಗೂ ಕನ್ನಡ ಮಾಧ್ಯಮದ ಉಚಿತ ಶಿಕ್ಷಣ. ಪ್ರತಿ ಗ್ರಾಮದಲ್ಲಿ ಉಚಿತ ಆರೋಗ್ಯ, ರೈತರಿಗೆ ಎಕರೆಗೆ 10 ಸಾವಿರ, ಪ್ರತಿ ವರ್ಷ ರೈತರು ಎಲ್ಲಿಯೂ ಸಾಲ ಪಡೆಯಬೇಕಿಲ್ಲ. ದಿನಕ್ಕೆ 24 ಗಂಟೆ ಉಚಿತ ವಿದ್ಯುತ್‌ ನೀಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ