ಕಾಂಗ್ರೆಸ್‌ ಕೊಟ್ಟಿದ್ದು ಕಾಲು ಮುರುಕ ಕುದುರೆ: ಕು​ಮಾ​ರ​ಸ್ವಾಮಿ

Published : Mar 03, 2023, 08:59 AM IST
ಕಾಂಗ್ರೆಸ್‌ ಕೊಟ್ಟಿದ್ದು ಕಾಲು ಮುರುಕ ಕುದುರೆ: ಕು​ಮಾ​ರ​ಸ್ವಾಮಿ

ಸಾರಾಂಶ

ಸಂವಾದ ಕಾರ್ಯ​ಕ್ರ​ಮ​ದಲ್ಲಿ ಕಾಂಗ್ರೆಸ್‌ ವಿರು​ದ್ಧ ಕುಮಾ​ರ​ಸ್ವಾಮಿ ಕಿಡಿ,  ‘ಕೈ’ ಜತೆ​ಗಿನ ಹೊಂದಾ​ಣಿ​ಕೆ​ಯಿಂದ ತೊಂದ​ರೆ​ಯಾ​ಗಿದ್ದು ನಿಜ: ಎಚ್‌​ಡಿ​ಕೆ

ಮೈಸೂರು(ಮಾ.03):  ಮುಖ್ಯಮಂತ್ರಿಯಾಗಿ ನಾನು ಏನೂ ಕೆಲಸ ಮಾಡಲಿಲ್ಲ, ಕೊಟ್ಟಕುದುರೆ ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂದು ಹೇಳು​ತ್ತಾರೆ. ಆದರೆ ನೀವು ನೀಡಿದ್ದು ಕಾಲು ಮುರುಕ ಕುದುರೆ. ಅದನ್ನು ಏರು ಎನ್ನುವವನನ್ನು ಮನೆ ಮುರುಕ ಅಂತಾರೆ ಎಂದು ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯಗೆ ಮಾಜಿ ಮುಖ್ಯ​ಮಂತ್ರಿ ಎಚ್‌.​ಡಿ.​ಕು​ಮಾ​ರ​ಸ್ವಾಮಿ ತಿರು​ಗೇಟು ನೀಡಿ​ದ್ದಾ​ರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದ ರೈತರ .25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ತೃಪ್ತಿ ನನಗಿದೆ. ನನ್ನ ಇಮೇಜ್‌ ಈಗಲೂ ಹಾಳಾಗಿಲ್ಲ. ಕಾಂಗ್ರೆಸ್‌ ಜತೆಗಿನ ಹೊಂದಾಣಿಕೆಯಿಂದ ತೊಂದರೆಯಾಗಿದೆ ನಿಜ. ಕಾಂಗ್ರೆಸ್‌ ಜೊತೆಗಿನ ಹೊಂದಾಣಿಕೆಯಿಂದ ತಪ್ಪಾಯಿತು. ನಾವು ರಾಜಕೀಯವಾಗಿ ಟ್ರ್ಯಾಪ್‌ ಆಗಿದ್ದೇವೆ. ಕಾಂಗ್ರೆಸ್‌ಗೆ ನಮ್ಮಿಂದ ಅನುಕೂಲವಾಗಿದೆಯೇ ಹೊರತು, ನಮಗೆ ಅನುಕೂಲವಾಗಿಲ್ಲ. ನಾನು ಸಿಎಂ ಆದ ಮೇಲೆ ತುಂಬಾ ಹಿಂಸೆ ಆಯಿತು. ತಾಜ್‌ ಹೋಟೆಲ್‌ನಲ್ಲಿದ್ದರೂ ಶಕ್ತಿಭವನದಲ್ಲಿ ಬೆಳಗ್ಗೆ 8 ರಿಂದಲೇ ಸಭೆ ನಡೆಸುತ್ತಿದ್ದೆ. ನನ್ನ ಗುರಿ ರೈತರ ಸಾಲ ಮನ್ನಾ ಮಾಡುವುದಾಗಿತ್ತು. ಬಳಿಕ ಸಚಿವ ಸ್ಥಾನದ ಸಂಖ್ಯೆಬಲದಲ್ಲಿ ಗೊಂದಲ, ಶಿಷ್ಟಾಚಾರ ಬಿಟ್ಟು ಅಧಿಕಾರಿಗಳ ವರ್ಗಾವಣೆ ಆಯಿತು. ಶಾಸಕಾಂಗ ಪಕ್ಷದ ಸಭೆ ಎಂದು ಕೆ.ಜೆ.ಜಾಜ್‌ರ್‍ ಅವರ ಹೋಟೆಲ್‌ಗೆ ಕರೆದರು, ಆದರೆ ಒಳಗೆ ಬಾ ಎನ್ನಲಿಲ್ಲ. ಸಿಎಂ ಆದವನು ಸುಮಾರು 15 ರಿಂದ 20 ನಿಮಿಷ ಹೊರಗೆ ಅಬ್ಬೇಪಾರಿಯಂತೆ ನಿಂತಿದ್ದೆ. ನೀವು ಹೇಗೆ ನಡೆಸಿಕೊಂಡಿದ್ದೀರಿ ಎಂಬುದು ಗೊತ್ತಿಲ್ಲವೇ ಎಂದು ಕುಮಾರಸ್ವಾಮಿ ಕಿಡಿ​ಕಾ​ರಿ​ದ​ರು.

ಸಿಎಂರನ್ನು ಚಪ್ರಾಸಿ ತರ ನಡೆಸಿಕೊಂಡಿರಿ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗರಂ

ಮೈಸೂ​ರಲ್ಲಿ 26 ಅಥವಾ 27ರಂದು ಪಂಚ​ರ​ತ್ನ ಸಮಾ​ರೋ​ಪ: ಎಚ್‌​ಡಿ​ಕೆ

ಪಂಚರತ್ನ ಯಾತ್ರೆ ಮೂಲಕ ಹೊಸ ಇತಿಹಾಸ ಬರೆಯಲು ಮುಂದಾಗಿದ್ದೇವೆ. ಇದರ ಸಮಾರೋಪ ಮಾ.26 ಅಥವಾ 27 ರಂದು ಮೈಸೂರಿನಲ್ಲಿ ನಡೆಯಲಿದ್ದು, ಸುಮಾರು 10 ಲಕ್ಷ ಮಂದಿಯೊಂದಿಗೆ ಸಮಾರೋಪ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಇದೊಂದು ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಎಚ್‌.​ಡಿ.​ಕು​ಮಾ​ರ​ಸ್ವಾಮಿ ಹೇಳಿ​ದ​ರು.

ಲಿಂಗಾಯತ ಪ್ಲೇ ಕಾರ್ಡ್‌ ನಡೆಯಲ್ಲ

ಹಾಸನ ಜೆಡಿಎಸ್‌ನ ಭದ್ರಕೋಟೆ. ಅಲ್ಲಿನ ಏಳು ಸ್ಥಾನವನ್ನು ನಾವು ಗೆಲ್ಲುತ್ತೇವೆ. ಇನ್ನೊಂದು ವಾರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಗೊಳಿಸಲಾಗುವುದು. ಬಿಜೆಪಿಗೆ ಈ ಬಾರಿ ಲಿಂಗಾಯತ ಪ್ಲೇ ಕಾರ್ಡ್‌ ಉಪಯೋಗ ಆಗದು. ಏಕೆಂದರೆ ಪಂಚಮಸಾಲಿಗಳ ಮೀಸಲಾತಿ ವಿಚಾ​ರ​ದಲ್ಲಿ ಸರ್ಕಾರ ಎಡವಿದೆ. ಒಳ ಮೀಸಲಾತಿ ವಿಷಯದಲ್ಲಿ ಹುಡುಗಾಟಿಕೆ ಮಾಡಿದೆ. ನಾವು ಲಿಂಗಾಯತರಿಗೆ ಅವಕಾಶ ಇರುವ ಕಡೆ ಟಿಕೆಟ್‌ ಕೊಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!