ಕಾಂಗ್ರೆಸ್‌ ಸರ್ಕಾರದ ಚೊಂಬು ಖಾಲಿ: ಕುಮಾರಸ್ವಾಮಿ ವಾಗ್ದಾಳಿ

Published : Apr 21, 2024, 11:38 AM IST
ಕಾಂಗ್ರೆಸ್‌ ಸರ್ಕಾರದ ಚೊಂಬು ಖಾಲಿ: ಕುಮಾರಸ್ವಾಮಿ ವಾಗ್ದಾಳಿ

ಸಾರಾಂಶ

ಕೋವಿಡ್ ಕಾಲದಲ್ಲೂ ರಾಜ್ಯದ ಖಜಾನೆ ತುಂಬಿತ್ತು. ಕಾಂಗ್ರೆಸ್ ಅಪಪ್ರಚಾರದ ನಡುವೆಯೂ ಬಿಜೆಪಿ ಸರ್ಕಾರ ಖಜಾನೆಯನ್ನು ಸುಸ್ಥಿತಿಯಲ್ಲಿಟ್ಟಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಖಜಾನೆ ಖಾಲಿಯಾಗಿದೆ ಎಂದು ಕಿಡಿ ಕಾರಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 

ಮೈಸೂರು(ಏ.21):  ಕಾಂಗ್ರೆಸ್ ಸರ್ಕಾರ ನೀಡಿದ ಚೊಂಬು ಜಾಹೀರಾತಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಸರ್ಕಾರದ ರಾಜ್ಯ ಚೊಂಬು ಖಾಲಿಯಾಗಿದೆ. ಅದನ್ನು ತುಂಬಿಸಿಕೊಡಿ ಎಂದು ಮೋದಿ ಅವರ ಬಳಿ ರಾಜ್ಯ ಸರ್ಕಾರ ಭಿಕ್ಷೆ ಕೇಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ಕೋವಿಡ್ ಕಾಲದಲ್ಲೂ ರಾಜ್ಯದ ಖಜಾನೆ ತುಂಬಿತ್ತು. ಕಾಂಗ್ರೆಸ್ ಅಪಪ್ರಚಾರದ ನಡುವೆಯೂ ಬಿಜೆಪಿ ಸರ್ಕಾರ ಖಜಾನೆಯನ್ನು ಸುಸ್ಥಿತಿಯಲ್ಲಿಟ್ಟಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಖಜಾನೆ ಖಾಲಿಯಾಗಿದೆ ಎಂದು ಕಿಡಿ ಕಾರಿದ್ದಾರೆ. 

ದೇಶದಲ್ಲಿ ಮೋದಿ ಅಲೆ ಇದ್ಯಾ? ಈ ಬಾರಿ ಹಾಗೇನು ಕಾಣ್ತಿಲ್ಲ ಎಂದ ಜಮೀರ್ ಅಹ್ಮದ್

ಕಾಂಗ್ರೆಸ್ ಸರ್ಕಾರ ಕನ್ನಡಿಗರ ಕೈಗೆ ಚೊಂಬು ಕೊಟ್ಟಿದೆ. ಆ ಖಾಲಿ ಚೊಂಬು ತುಂಬಿಸಿಕೊಡಿ ಎಂದು ಈಗ ಪ್ರಧಾನಿ ಮೋದಿ ಬಳಿ ಕೇಳಲು ನಿಂತಿದ್ದಾರೆ ಎಂದು ಎಚ್ .ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ