ರೈತರಿಗೆ ಒಳ್ಳೆಯ ಕಾರ್ಯಕ್ರಮ ನೀಡದಿದ್ದರೆ ಜೆಡಿಎಸ್‌ ವಿಸರ್ಜನೆ: ಕುಮಾರಸ್ವಾಮಿ

Published : Jan 19, 2023, 11:30 PM IST
ರೈತರಿಗೆ ಒಳ್ಳೆಯ ಕಾರ್ಯಕ್ರಮ ನೀಡದಿದ್ದರೆ ಜೆಡಿಎಸ್‌ ವಿಸರ್ಜನೆ: ಕುಮಾರಸ್ವಾಮಿ

ಸಾರಾಂಶ

ರೈತರು ಸಾಲ ಮಾಡಿಕೊಂಡು ಸಂಕಷ್ಟದಲ್ಲಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರನ್ನು ಸಾಲ ಮುಕ್ತರನ್ನಾಗಿ ಮಾಡಲಾಗುವುದು. ಜೆಡಿಎಸ್‌ಗೆ ಸ್ಪಷ್ಟ ಬಹುಮತ ನೀಡಿ ಐದು ವರ್ಷ ಅವಧಿ ಅಧಿಕಾರ ನೀಡಿದರೆ ರೈತರಿಗೆ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ.  

ವಿಜಯಪುರ(ಜ.19): ಜೆಡಿಎಸ್‌ ಪಕ್ಷ ರೈತರಿಗೆ ಸಾಲ ಮುಕ್ತರನ್ನಾಗಿ ಮಾಡಲು ಒಳ್ಳೆಯ ಕಾರ್ಯಕ್ರಮ ಕೊಡದಿದ್ದರೆ 2028ರಲ್ಲಿ ಜೆಡಿಎಸ್‌ ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾವುಕರಾಗಿ ಹೇಳಿದರು.

ಬುಧವಾರ ಮೂರನೇ ಹಂತದ ಪಂಚರತ್ನ ರಥ ಯಾತ್ರೆ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಆಯೋಜಿಸಿದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ರೈತರು ಸಾಲ ಮಾಡಿಕೊಂಡು ಸಂಕಷ್ಟದಲ್ಲಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರನ್ನು ಸಾಲ ಮುಕ್ತರನ್ನಾಗಿ ಮಾಡಲಾಗುವುದು. ಜೆಡಿಎಸ್‌ಗೆ ಸ್ಪಷ್ಟಬಹುಮತ ನೀಡಿ ಐದು ವರ್ಷ ಅವಧಿ ಅಧಿಕಾರ ನೀಡಿದರೆ ರೈತರಿಗೆ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಒಂದೊಮ್ಮೆ ಜೆಡಿಎಸ್‌ನಿಂದ ರೈತರಿಗೆ ಒಳ್ಳೆಯ ಕಾರ್ಯಕ್ರಮ ನೀಡದಿದ್ದರೆ 2028ರಲ್ಲಿ ಪಕ್ಷವನ್ನೇ ವಿಸರ್ಜಿಸುತ್ತೇನೆ. ಮುಂದೆ ನಿಮ್ಮ ಬಳಿ ಮತ ಕೇಳಲು ಬರುವುದಿಲ್ಲ ಎಂದು ಕುಮಾರಸ್ವಾಮಿ ಅವರು ಭಾವುಕರಾದರು.

ಅಧಿಕಾರ ನೀಡಿದರೆ 5 ವರ್ಷಗಳಲ್ಲಿ ಕ್ರಾಂತಿಕಾರಿ ಬದಲಾವಣೆ: ಎಚ್‌ಡಿಕೆ

ಸಿಂದಗಿಯಲ್ಲಿ ಜನರು ದೇವೇಗೌಡರು ನೀಡಿದ ನೀರಾವರಿ ಯೋಜನೆ ನೆನಪಿಟ್ಟುಕೊಂಡಿದ್ದಾರೆ. ನಮ್ಮ ತಪ್ಪಿನಿಂದ ಕಳೆದ ಚುನಾವಣೆಯಲ್ಲಿ ಸೋಲುಂಡಿದ್ದೇವೆ. ಅಂದು ದೇವೇಗೌಡರನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿದ್ದೀರಿ. ದೇವೇಗೌಡರ ಮೇಲೆ ನೀವು ಇಟ್ಟಿರುವ ಪ್ರೀತಿಯನ್ನು ನಾನು ಮರೆತಿಲ್ಲ. ಬಿಜೆಪಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ಕಾಂಗ್ರೆಸ್‌, ಬಿಜೆಪಿ ಸರ್ಕಾರಗಳು ರೈತರಿಗಾಗಿ ಕಾರ್ಯಕ್ರಮ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್