
ನವದೆಹಲಿ(ಸೆ.08): ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಜವಳಿ ಸಚಿವ ಶಂಕರ ಮುನೇನಕೊಪ್ಪ ಅವರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಶೆಟ್ಟರ್ ಹಾಗೂ ಮುನೇನಕೊಪ್ಪ ಅವರು ದೆಹಲಿಯ ಜಿಆರ್ಜಿ ರಸ್ತೆಯಲ್ಲಿರುವ ಅರುಣ್ ಸಿಂಗ್ ನಿವಾಸಕ್ಕೆ ತೆರಳಿ ಕೆಲಕಾಲ ಮಾತುಕತೆ ನಡೆಸಿದರು. ಚುನಾವಣೆ ಫಲಿತಾಂಶದ ಕುರಿತು ಮಾಹಿತಿ ನೀಡಿದರು.
ಶಾಕ್ ಕೊಟ್ಟ ಕೋನರೆಡ್ಡಿ, ದೇವೇಗೌಡ್ರಿಗೆ ರಾಜೀನಾಮೆ ಸಲ್ಲಿಕೆ
ಈ ವಿಚಾರವಾಗಿ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಆರತಕ್ಷತೆ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದೇವೆ. ಹುಬ್ಬಳ್ಳಿ-ಧಾರವಾಡ ಚುನಾವಣೆ ಫಲಿತಾಂಶ ವಿಚಾರವಾಗಿ ಚರ್ಚೆ ನಡೆಸಿದ್ದೇವೆ. ಇದನ್ನು ಹೊರತುಪಡಿಸಿ ಬೇರಿನ್ಯಾವ ರಾಜಕೀಯ ವಿಚಾರವೂ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.