'ಮೈತ್ರಿ ಸರ್ಕಾರ ಬೀಳಿಸಲು ಹೇಳಿದ್ದೇ ಸಿದ್ದರಾಮಯ್ಯ'

Published : Nov 27, 2019, 07:53 AM IST
'ಮೈತ್ರಿ ಸರ್ಕಾರ ಬೀಳಿಸಲು ಹೇಳಿದ್ದೇ ಸಿದ್ದರಾಮಯ್ಯ'

ಸಾರಾಂಶ

ಮೈತ್ರಿ ಸರ್ಕಾರ ಬೀಳಿಸಲು ಹೇಳಿದ್ದೇ ಸಿದ್ದು| ಸಿದ್ದರಾಮಯ್ಯ ನೀಡಿದ್ದ ಸೂಚನೆಯಂತೆ ಆಪ್ತರೆಲ್ಲ ಸೇರಿ ರಾಜೀನಾಮೆ ಕೊಟ್ಟರು: ಆರ್. ಅಶೋಕ್ 

ಸೂಲಿಬೆಲೆ[ನ.27]: ಸರ್ಕಾರ ಬೀಳಿಸಲು ಸಿದ್ದರಾಮಯ್ಯ ನೀಡಿದ್ದ ಸೂಚನೆಯಂತೆ ಆಪ್ತರೆಲ್ಲ ಸೇರಿ ರಾಜೀನಾಮೆ ಕೊಟ್ಟರು ಎಂದು ಕಂದಾಯ ಸಚಿವ ಆರ್‌.ಅಶೋಕ ಆರೋಪಿಸಿದ್ದು ಇದನ್ನು ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್‌ ಸಮರ್ಥಿಸಿಕೊಂಡಿದ್ದಾರೆ.

ಹೊಸಕೋಟೆ ಅನುಗೊಂಡಹಳ್ಳಿ ಹೋಬಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಶೋಕ, ಎಂ.ಟಿ.ಬಿ.ನಾಗರಾಜ್‌ ನನಗೆ ಪರಿಚಯವಿರಲಿಲ್ಲ. ಬಾಂಬೆಯಲ್ಲಿ ನಾವೆಲ್ಲ ಒಟ್ಟಿಗೆ ಇದ್ದೀವಿ. ಸರ್ಕಾರ ಬೀಳಿಸೋಕೆ ಹೇಳಿದ್ದೇ ಸಿದ್ದರಾಮಯ್ಯ. ಅದರಂತೆ ಆಪ್ತರೆಲ್ಲ ಕೈ ಜೋಡಿಸಿ ರಾಜಿನಾಮೆ ಕೊಟ್ಟರು ಎಂದು ಹೇಳಿದರು. ಈಗಲೂ ಕೆಲ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಸಂಪರ್ಕದಲ್ಲಿದ್ದು, ಉಪ ಚುನಾವಣೆ ಮುಗಿದ ನಂತರ ಅವರೆಲ್ಲ ಸೇರಿಕೊಳ್ಳುತ್ತಾರೆ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್‌ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಎಷ್ಟುಬೇಡಿದರೂ ಅಭಿವೃದ್ಧಿಗಾಗಿ ಅನುದಾನ ಕೊಡಲಿಲ್ಲ. ಸಿದ್ದರಾಮಯ್ಯನವರ ಬಳಿ ಕೇಳಿದಾಗ ಸರ್ಕಾರ ಬೀಳಿಸೋಣ ಅಂತ ಹೇಳಿದರು. ಅದಕ್ಕೆ ರಾಜೀನಾಮೆ ಕೊಟ್ಟೆ. ಈಗ ನನ್ನನ್ನು ಮೋಸಗಾರ, ದ್ರೋಹಿ ಅನ್ನುತ್ತಿದ್ದಾರೆ ಎಂದು ತಿಳಿಸಿದರು.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!