
ಬೆಂಗಳೂರು (ಆ.15): ವಿಧಾನಮಂಡಲದ ಅಧಿವೇಶನಕ್ಕೆ ಮೊದಲ ದಿನ ಗೈರು ಹಾಜರಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವಾದ ಶುಕ್ರವಾರ ಕಲಾಪಕ್ಕೆ ಹಾಜರಾದರು.
ವಿಧಾನಸಭೆಗೆ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ಸಿದ್ದರಾಮಯ್ಯ ಸದನಕ್ಕೆ ಆಗಮಿಸಿದರು. ನೂತನ ಸಭಾಧ್ಯಕ್ಷರ ಬಗ್ಗೆ ಸಚಿವ ಯು.ಟಿ.ಖಾದರ್ ಮಾತನಾಡುವಾಗ ಸಿದ್ದರಾಮಯ್ಯ ಸದನಕ್ಕೆ ಬಂದರು. ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಬಳಿಕ ಶಾಸಕರಾಗಿ ಮೊದಲ ಬಾರಿಗೆ ಅಧಿವೇಶನದಲ್ಲಿ ಭಾಗಿಯಾಗಿದ್ದು, ಆಡಳಿತ ಪಕ್ಷದ ಸದಸ್ಯರ ಕೊನೆಯ ಸಾಲಿನಲ್ಲಿ ಕುಳಿತು ಕೊಂಡಿದ್ದರು. ಈ ವೇಳೆ, ಕಾಂಗ್ರೆಸ್ನ ಕೆಲ ಶಾಸಕರು ಹಾಗೂ ಸಚಿವರು ಸಿದ್ದರಾಮಯ್ಯ ಬಳಿಗೆ ಬಂದು ಅವರನ್ನು ಮಾತನಾಡಿಸಿದರು.
ಬಳಿಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರ ಬಳಿ ತೆರಳಿ ಪಕ್ಕದ ಆಸನದಲ್ಲಿ ಕುಳಿತು ಆತ್ಮೀಯವಾಗಿ ಮಾತನಾಡಿಸಿದರು. ಬಳಿಕ, ಸಚಿವರಾದ ಪುಟ್ಟರಂಗ ಶೆಟ್ಟಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಇನ್ನಿತರ ಕೆಲ ಸಚಿವರು ಹಾಗೂ ಶಾಸಕರು ಸಿದ್ದರಾಮಯ್ಯ ಅವರ ಬಳಿ ತೆರಳಿ ಕುಶಲೋಪರಿ ವಿಚಾರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.