ಅಖಾಡದಲ್ಲಿ ನಾವೂ ಕುಸ್ತಿ ಆಡಿದವರೇ: ಸಿದ್ದು ಟ್ವೀಟ್ ಗುದ್ದು!

Published : Jan 16, 2019, 02:48 PM IST
ಅಖಾಡದಲ್ಲಿ ನಾವೂ ಕುಸ್ತಿ ಆಡಿದವರೇ: ಸಿದ್ದು ಟ್ವೀಟ್ ಗುದ್ದು!

ಸಾರಾಂಶ

‘ಬಿಜೆಪಿಯವರೇ ನಮಗೆ ಕುಸ್ತಿ ಆಡೋದನ್ನ ಕಲಿಸಬೇಡಿ’| ‘ಬಿಜೆಪಿ ಆಪರೇಷನ್ ಕಮಲದಿಂದ ಸರ್ಕಾರಕ್ಕೆ ಯಾವುದೇ ಭಯವಿಲ್ಲ’| ಸರಣಿ ಟ್ವೀಟ್ ಮುಂದುವರೆಸಿರುವ ಮಾಜಿ ಸಿಎಂ ಸಿದ್ದರಾಮಯ್ಯ|  ‘ನಾವೂ ಕೂಡ ಅಖಾಡದಲ್ಲಿ ಕುಸ್ತಿ ಆಡಿದವರೇ’ ಎಂದ ಸಿದ್ದು| ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಸಿದ್ದರಾಮಯ್ಯ

ಬೆಂಗಳೂರು(ಜ.16): ಬಿಜೆಪಿ ಆಪರೇಷನ್ ಕಮಲದಿಂದ ಸರ್ಕಾರಕ್ಕೆ ಯಾವುದೇ ಭಯವಿಲ್ಲ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ, ಸರ್ಕಾರ ಬೀಳುತ್ತದೆ ಎಂಬೆಲ್ಲಾ ಹೇಳಿಕೆಗಳು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. 

ಈ ಮಧ್ಯೆ ತಮ್ಮ ಸರಣಿ ಟ್ವೀಟ್ ಮುಂದುವರೆಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ನಾವೂ ಕೂಡ ಅಖಾಡದಲ್ಲಿ ಕುಸ್ತಿ ಆಡಿದವರೇ, ಎಲ್ಲಾ ಪಟ್ಟುಗಳು ನಮಗೂ ಗೊತ್ತು..’ ಎಂದು ಬಿಜೆಪಿ ಕುರಿತು ವ್ಯಂಗ್ಯವಾಡಿದ್ದಾರೆ.

‘ರಾಜ್ಯದ ಕೆಲವು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಾವೇನು ಕೈಕಟ್ಟಿ ಕೂತಿಲ್ಲ. ರಾಜಕೀಯ ಅಖಾಡದಲ್ಲಿ ಕುಸ್ತಿ ಆಡಿದವರು ನಾವು. ಯಾವ ಸಂದರ್ಭದಲ್ಲಿ ಯಾವ ಪಟ್ಟು ಬಳಸಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು..’ ಎಂದು ಸಿದ್ದು ಖಾರವಾಗಿಯೇ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ