ಕೊಟ್ಟ ಮಾತಿನಂತೆ ನಡೆಯದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

Published : Feb 16, 2023, 02:40 AM IST
ಕೊಟ್ಟ ಮಾತಿನಂತೆ ನಡೆಯದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಸಾರಾಂಶ

ಚುನಾವಣೆಗೆ ಇನ್ನು ಎರಡು ತಿಂಗಳು ಬಾಕಿ ಇದೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಇನ್ನೊಂದು ತಿಂಗಳಷ್ಟೇ ಅವಕಾಶ ಇದೆ. ಅದಾದ ನಂತರ ಜನ ಅವರನ್ನು ಮನೆಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. 

ಕಲಾದಗಿ (ಫೆ.16): ಚುನಾವಣೆಗೆ ಇನ್ನು ಎರಡು ತಿಂಗಳು ಬಾಕಿ ಇದೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಇನ್ನೊಂದು ತಿಂಗಳಷ್ಟೇ ಅವಕಾಶ ಇದೆ. ಅದಾದ ನಂತರ ಜನ ಅವರನ್ನು ಮನೆಗೆ ಕಳುಹಿಸಲು ಕಾಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆ ತಾಲೂಕಿನ ಕಲಾದಗಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾರರಿಗೆ ಸಕ್ಕರೆ ಕೊಡುತ್ತೇವೆ ಎಂದು ಆಮಿಷ ಒಡ್ಡಿ ಚುನಾವಣೆ ಗೆಲ್ಲಲು ತಯಾರಿ ಮಾಡುತ್ತಿರುವ ಇವರನ್ನು ಮನೆಗೆ ಕಳುಹಿಸದೆ ಬಿಟ್ಟರೆ ರಾಜ್ಯವನ್ನು ಲೂಟಿ ಮಾಡುತ್ತಾರೆ. 

ಅದಕ್ಕೆ ಈ ಸರ್ಕಾರವನ್ನು ಅಲಿಬಾಬಾ ಮತ್ತು 40 ಮಂದಿ ಕಳ್ಳರ ಕೂಟ ಎಂದು ಕರೆಯುವುದು. ಇವರಿಗೆ ಮಾನ ಮಾರ್ಯಾದೆ ಏನೂ ಇಲ್ಲ, ಲಜ್ಜೆಗೆಟ್ಟಜನರು. ಇವರು ಮತ್ತೆ ಅಧಿಕಾರಕ್ಕೆ ಬಂದರೆ ರೈತರು, ಅಲ್ಪಸಂಖ್ಯಾತರು, ಬಡವರು, ಮಹಿಳೆಯರು ಯಾರೂ ಉಳಿಯುವುದಿಲ್ಲ ಎಂದು ದೂರಿದರು. ಮೋದಿ ಅವರು ಪ್ರವಾಹ ಬಂದಾಗ, ಕೊರೋನಾ ಬಂದು ಜನ ಸಾಯುವಾಗ ಕರ್ನಾಟಕಕ್ಕೆ ಬರಲಿಲ್ಲ. ಈಗ ಚುನಾವಣೆ ಬಂದಿರುವುದರಿಂದ ಮೇಲಿಂದ ಮೇಲೆ ಬರುತ್ತಿದ್ದಾರೆ. ಮೋದಿ ಅವರು ಸೇಡಂನಲ್ಲಿ ಬಂಜಾರ ಜನಾಂಗದವರಿಗೆ ಹಕ್ಕುಪತ್ರ ವಿತರಣೆ ಮಾಡಿದ್ದರು. 

ಕಾಂಗ್ರೆಸ್‌ ಭಯೋತ್ಪಾದಕರ ಪಕ್ಷ: ನಳಿನ್‌ಕುಮಾರ್‌ ಕಟೀಲ್‌

ತಾಂಡಾಗಳು, ಕುರುಬರ ಹಟ್ಟಿ, ಮಜರೆಗಳು, ನಾಯಕನ ಹಟ್ಟಿಯಲ್ಲಿ ವಾಸ ಮಾಡುವ ಜನರಿಗೆ ವಾಸಿಸುವವನೆ ಮನೆಯೊಡೆಯ ಎಂಬ ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದು, ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿದ್ದು ನಮ್ಮ ಸರ್ಕಾರ. ಅಡುಗೆ ಮಾಡಿದ್ದು ನಾವು, ಅದನ್ನು ಬಡ್ಸೋಕೆ ಬಂದಿದ್ದು ಮೋದಿ ಅವರು ಎಂದು ಹೇಳಿದರು. ನಾವು ಕೊಟ್ಟಮಾತಿನಂತೆ ನಡೆದುಕೊಳ್ಳುತ್ತೇವೆ. ಇದೇ ಕಾರಣಕ್ಕೆ ನಮ್ಮ ಪ್ರಜಾಧ್ವನಿ ಯಾತ್ರೆಯನ್ನು ಬಸವಾದಿ ಶರಣರ ಕರ್ಮಭೂಮಿ ಕೂಡಲಸಂಗಮದಿಂದ ಆರಂಭ ಮಾಡಿದ್ದು. 

ನಾನು ಕೊಟ್ಟಮಾತಿನಂತೆ ನಡೆದುಕೊಳ್ಳದೆ ಹೋದರೆ ಒಂದು ಕ್ಷಣವೂ ರಾಜಕೀಯದಲ್ಲಿ ಇರುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಿದರು. ಬಿಜೆಪಿ ಸರ್ಕಾರ ಕಳೆದ 4 ವರ್ಷದಿಂದ ಒಂದೇ ಒಂದು ಹೊಸ ಮನೆ ಮಂಜೂರು ಮಾಡಿಕೊಟ್ಟಿಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ದುರ್ಬಲ ಜನರಿಗೆ ಸೂರು ನೀಡುವ ಕೆಲಸ ಮಾಡುತ್ತೇವೆ. ಸೈಟ್‌ ಕೊಡುತ್ತೇವೆ. ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ ಯಾರೇ ಬಂದರೂ ಅವರ ಮಾತುಗಳಿಗೆ ಮರುಳಾಗದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದರು.

ನನ್ನನ್ನು ಹೊಡೆದು ಹಾಕಲು ಬಿಡುತ್ತೀರಾ?: ಮಂಡ್ಯದಲ್ಲಿ ಸಚಿವ ಅಶ್ವತ್‌ ನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್‌ ರೀತಿ ಹೊಡೆದು ಹಾಕಬೇಕು ಎಂದು ಹೇಳಿದ್ದಾರೆ. ನೀವೆಲ್ಲ ನನ್ನನ್ನು ಹೊಡೆದುಹಾಕಲು ಬಿಡುತ್ತೀರ? ನಾನು ಟಿಪ್ಪು ಸುಲ್ತಾನ್‌, ಸಂಗೊಳ್ಳಿ ರಾಯಣ್ಣ, ಸಂತ ಸೇವಾಲಾಲ್‌, ಬಸವಣ್ಣ, ಕನಕದಾಸರು ಈ ಎಲ್ಲರನ್ನೂ ಗೌರವಿಸುತ್ತೇನೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌ ಹೀಗೆ ಎಲ್ಲ ಧರ್ಮದವರನ್ನು ಸಮಾನವಾಗಿ ಕಾಣುತ್ತೇನೆ. ಎಲ್ಲ ಜನರನ್ನು ಪ್ರೀತಿ ಮಾಡುತ್ತೇನೆ. ಬಿಜೆಪಿಯವರು ಸಮಾಜದಲ್ಲಿ ದ್ವೇಷ ಹುಟ್ಟುಹಾಕುವವರು, ದಯವಿಟ್ಟು ಇಂಥಾ ಸ್ವಾರ್ಥಿಗಳಿಗೆ ನಿಮ್ಮ ಮತ ನೀಡಬೇಡಿ ಎಂದು ಹೇಳಿದರು.

ಬೃಹತ್‌ ಸೇಬು ಹಾರ: ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಬೀಳಗಿ ಮತಕ್ಷೇತ್ರದ ಜೆ.ಟಿ.ಪಾಟೀಲ ಅಭಿಮಾನಿ ಬಳಗ ಹಾಗೂ ನಾರಾಯಣ ಹಾದಿಮನಿ ಇವರಿಂದ 1 ಟನ್‌ ತೂಕದ ಬೃಹತ್‌ ಸೇಬು ಹಾರ, ಸೇವಂತಿ ಹೂ, ಚೆಂಡು ಹೂವು, ಸುವಾಸನೆ ಭರಿತ ಪನೀರ್‌ ಸೊಪ್ಪು ಮಿಶ್ರಿತ ಬೃಹತ್‌ ಹಾರಗಳನ್ನು ಅರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯಗೆ ಬೆಳ್ಳಿಗದೆ ನೀಡಿ ಸನ್ಮಾನಿಸಲಾಯಿತು.

ಕೋಲಾರದಿಂದ ಸ್ಪರ್ಧೆ, ಸಿದ್ದು ಕೈಗೊಂಡ ತಪ್ಪು ನಿರ್ಧಾರ: ಸಿ.ಎಂ.ಇಬ್ರಾಹಿಂ

ತಡವಾಗಿ ಬಂದ ಸಿದ್ದರಾಮಯ್ಯ: ಪ್ರಜಾಧ್ವನಿ ಕಾರ್ಯಕ್ರಮಕ್ಕೆ 12 ಗಂಟೆಗೆ ಆಗಮಿಸಬೇಕಾದ ಸಿದ್ದರಾಮಯ್ಯ ಕಲಾದಗಿಗೆ 4.45ಕ್ಕೆ ಆಗಮಿಸಿದರು. ಬೆಳಗ್ಗೆ 11 ಗಂಟೆಯಿಂದ ಸಿದ್ದರಾಮಯ್ಯನ ಆಗಮನಕ್ಕಾಗಿ ಕಾತುರದಿಂದ ಕಾಯುತ್ತಿದ್ದ ಕಾರ್ಯಕರ್ತರು, ಜನರು ಹಾಕಿದ ಪೆಂಡಾಲ್‌ ಒಳಗಡೆಯೇ ಅವರ ಬರುವಿಕೆಗೆ ಕಾಯ್ದು ಕುಳಿತಿದ್ದರು. ಬರೋಬ್ಬರಿ ಐದು ಗಂಟೆ ತಡವಾದರೂ ಜನರು ಸ್ಥಳದಿಂದ ಕದಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌