40% Commission: 40% ಕಮಿಷನ್‌ಗೆ ಉತ್ತರಿಸದ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

Published : Sep 02, 2022, 07:43 AM IST
40% Commission: 40% ಕಮಿಷನ್‌ಗೆ ಉತ್ತರಿಸದ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಸಾರಾಂಶ

ನಾನೂ ತಿನ್ನೋಲ್ಲ, ಇತರರಿಗೂ ತಿನ್ನೋಲು ಬಿಡೋಲ್ಲ ಎಂದರೆ ಇದೇನಾ?, ಟ್ವಿಟರ್‌ ಮೂಲಕ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನಾವಳಿ

ಬೆಂಗಳೂರು(ಸೆ.02): ಮುಖ್ಯಮಂತ್ರಿಗಳ ಸುಪರ್ದಿಯಲ್ಲಿಯೇ 24/7 ಭ್ರಷ್ಟಾಚಾರ ವಿರೋಧಿ ಸಹಾಯವಾಣಿ ಮಾಡುತ್ತೇವೆ ಎಂದು ಹೇಳಿದ್ದಿರಿ. ಇದೀಗ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆದರೂ ಉತ್ತರವಿಲ್ಲ. ಇದೇನಾ ‘ನಿಮ್ಮ ನಾ ಖಾವೂಂಗಾ, ನಾ ಖಾನೆ ದೂಂಗ’ ನರೇಂದ್ರ ಮೋದಿಯವರೇ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ‘ಉತ್ತರ ಕೊಡಿ ಬಿಜೆಪಿ’ ಅಭಿಯಾನದ ಅಂಗವಾಗಿ ಟ್ವಿಟರ್‌ ಮೂಲಕ ಸರಣಿ ಪ್ರಶ್ನೆ ಮಾಡಿರುವ ಅವರು, 2022ಕ್ಕೆ ಎಲ್ಲರ ಮನೆಗೆ ವಿದ್ಯುತ್‌ ನೀಡುತ್ತೇವೆ ಎಂದು ಹೇಳಿದ್ದಿರಿ. ಇದೀಗ ಕರ್ನಾಟಕದಲ್ಲಿ ದಿನಕ್ಕೆ ಕನಿಷ್ಠ 10 ಗಂಟೆಯೂ ವಿದ್ಯುತ್‌ ಇಲ್ಲ. ರಾಜ್ಯದ ಜನತೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದ್ದು, ಮಹಿಳೆಯರು ಮಸಾಲೆ ಅರೆಯಲು ವಿದ್ಯುತ್‌ ಕಚೇರಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕಾಗಿಯೇ ಜನರಿಗೆ ಕ್ಯಾಂಡಲ… ಹಚ್ಚಲು ಕರೆ ನೀಡಿದ್ದೀರಾ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.

ಬಿಬಿಎಂಪಿ: ಶೇ.50 ಕಮಿಷನ್‌ ಆರೋಪ ಬೆನ್ನಲ್ಲೇ ಗುತ್ತಿಗೆದಾರರಿಗೆ ಹಣ..!

ಸಣ್ಣ ಕೈಗಾರಿಕೆಗಳಿಗೆ ರೂ.6000 ಕೋಟಿ ನೆರವು ನೀಡುತ್ತೇವೆ ಎಂದು ಹೇಳಿಕೆ ನೀಡಿದ್ದೀರಿ. ಎರಡು ವರ್ಷಗಳಲ್ಲಿ 754 ಕೈಗಾರಿಕೆಗಳಿಗೆ ಬೀಗ, 44,000 ಉದ್ಯೋಗ ನಷ್ಟಉಂಟು ಮಾಡಿದ್ದೀರಿ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ನಿಮ್ಮ ಭರವಸೆ ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.

ಇನ್ನು ರೈತರಿಗೆ ಲಾಭದಾಯಕ ಬೆಂಬಲ ಬೆಲೆ, 2022ಕ್ಕೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದಿರಿ. ಎಂಎಸ್‌ಪಿ ಲೆಕ್ಕದಲ್ಲಿಯೇ ಮೋಸ ಮಾಡಿ ಎಂಎಸ್‌ಪಿ ದರದಲ್ಲಿ ಬೆಳೆ ಖರೀದಿಸುವವರೇ ಇಲ್ಲದಂತೆ ಮಾಡಿದ್ದೀರಿ. ರೈತರಿಗೆ ಇನ್ನೂ ಯಾವಾಗ ಅಚ್ಚೇ ದಿನ್‌ ನೀಡುತ್ತೀರಿ ಹೇಳಿ ಎಂದು ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!