ಸಿದ್ದರಾಮಯ್ಯಗೆ ಕೊರೋನಾ ದೃಢ, ಮೊಮ್ಮಗ ಕ್ವಾರಂಟೈನ್!

Published : Aug 04, 2020, 11:17 AM ISTUpdated : Aug 04, 2020, 11:43 AM IST
ಸಿದ್ದರಾಮಯ್ಯಗೆ ಕೊರೋನಾ ದೃಢ, ಮೊಮ್ಮಗ ಕ್ವಾರಂಟೈನ್!

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೊರೋನಾ ಸೋಂಕು| ಸಿದ್ದರಾಯ್ಯಗೆ  ಸಂಪರ್ಕಿಸಿದವರೆಲ್ಲರಿಗೂ ಕ್ವಾರಂಟೈನ್‌ ಆಗುವಂತೆ ಸೂಚನೆ| ದಿ. ರಾಕೇಶ್​​ ಪುತ್ರ ಧವನ್ ಜೊತೆಗೆ ಚೆಸ್ ಆಡಿದ್ದ ಸಿದ್ದರಾಮಯ್ಯ

ಬೆಂಗಳೂರು(ಆ.04): ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೊರೋನಾ ಸೋಂಕು ತಗುಲಿರುವುದು ದೇಢವಾಗಿದ್ದು, ಸದ್ಯ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಈಗಿರುವಾಗ ಇತ್ತೀಚೆಗೆ ಅವರನ್ನು ಸಂಪರ್ಕಿಸಿದವರೆಲ್ಲರಿಗೂ ಕ್ವಾರಂಟೈನ್‌ ಆಗುವಂತೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಮೊಮ್ಮಗ, ಧವನ್‌ಗೆ ಕ್ವಾರಂಟೀನ್​​​‌‌ಗೆ ಒಳಗಾಗುವಂತೆ ದೊಡ್ಡಪ್ಪ ಡಾ.ಯತೀಂದ್ರ ಸೂಚಿಸಿದ್ದಾರೆ. 

ಸಿಎಂ ಯಡಿಯೂರಪ್ಪ ಗುಣಮುಖರಾಗಲು ಆರೋಗ್ಯ ಸಚಿವ ದೇವರಲ್ಲಿ ಹರಕೆ

ಹೌದು ಅಗಸ್ಟ್ 2 ರಂದು ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ದರು. ಈ ವೇಳೆ ತಮ್ಮ ಮೊಮ್ಮಗ, ದಿ. ರಾಕೇಶ್​​ ಪುತ್ರ ಧವನ್ ಜೊತೆಗೆ ಚೆಸ್ ಆಡಿದ್ದರು. ಈಗ ಸಿದ್ದರಾಮಯ್ಯ ಅವರಿಗೆ ಸೋಂಕು ತಗುಲಿರೋದ್ರಿಂದ, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಧವನ್ ಕ್ವಾರಂಟೀನ್​​ಗೆ ಒಳಗಾಗುವಂತೆ ಸೂಚಿಸಲಾಗಿದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ತಗುಲಿದ ಕೊರೋನಾ ಸೋಂಕು!

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಇಬ್ಬರಿಗೂ ಒಂದು ದಿನದ ಅಂತರದಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಇಬ್ಬರೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜಕೀಯ ಗಣ್ಯರೆಲ್ಲರೂ ಶೀಘ್ರ ಗುಣಮುಖರಾಗುವಂತೆ ಇಬ್ಬರಿಗೂ ಹಾರೈಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!